ಮಾಜಿ ಶಾಸಕ ಬಸಪ್ಪನವರ ಸೇವೆ ಸಮಾಜಕ್ಕೆ ಮಾದರಿ

KannadaprabhaNewsNetwork |  
Published : Aug 24, 2026, 01:45 AM IST
ಎಂ.ಸಿ ಬಸಪ್ಪನವರ ನಿಸ್ವಾರ್ಥ ಸೇವೆ ಹಲವರಿಗೆ ಮಾರ್ಗದರ್ಶನ | Kannada Prabha

ಸಾರಾಂಶ

ಚಾಮರಾಜನಗರ: ನೇರ ನುಡಿ, ದಿಟ್ಟನಡೆಗೆ ಹೆಸರಾಗಿದ್ದ ಮಾಜಿ ಶಾಸಕ ಎಂ.ಸಿ. ಬಸಪ್ಪನವರ ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು

ಚಾಮರಾಜನಗರ: ನೇರ ನುಡಿ, ದಿಟ್ಟನಡೆಗೆ ಹೆಸರಾಗಿದ್ದ ಮಾಜಿ ಶಾಸಕ ಎಂ.ಸಿ. ಬಸಪ್ಪನವರ ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ಸಹಯೋಗದಲ್ಲಿ ನಡೆದ ಮಾಜಿ ಶಾಸಕ ಎಂ.ಸಿ.ಬಸಪ್ಪ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಹಾಗೂ ದತ್ತಿ ಕಾರ್ಯಕ್ರಮದಲ್ಲಿ ಎಂ.ಸಿ.ಬಸಪ್ಪ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಮಾನವ ಜೀವನದಲ್ಲಿ ಶುದ್ಧ ಹಸ್ತ, ಪ್ರಾಮಾಣಿಕತೆ, ನಿಸ್ವಾರ್ಥ ಸೇವೆ ಬಹಳ ಎತ್ತರಕ್ಕೆ ಕೊಂಡೊಯ್ಯುತ್ತದೆ. ಅದಕ್ಕೆ ಎಂ.ಸಿ.ಬಸಪ್ಪನವರೇ ಪ್ರತ್ಯಕ್ಷ ಉದಾಹರಣೆ ಎಂದು ಹೇಳಿದರು.

ಮಾಜಿ ಶಾಸಕ ಎಂ.ಸಿ.ಬಸಪ್ಪ ಅವರು ಹಲವರಿಗೆ ಜೀವನ ಕಟ್ಟಿಕೊಟ್ಟಿದ್ದಾರೆ. ಇಂತಹವರ ಹೆಸರಿನಲ್ಲಿ ಸಮಾಜ ಸೇವಾ ಪ್ರಶಸ್ತಿಯನ್ನು ಪರಿಸರವಾದಿ ಸರಳ ಸಜ್ಜನ ಪುಣಜನೂರು ದೊರೆಸ್ವಾಮಿ ಅವರಿಗೆ ನೀಡುತ್ತಿರುವುದು ಅರ್ಥಪೂರ್ಣವಾಗಿದೆ.

ಯಾವುದೇ ಆಮಿಷಕ್ಕೊಳಗಾಗದೇ ತಮ್ಮ ಜೀವನದುದ್ದಕ್ಕೂ ಪ್ರಾಮಾಣಿಕ ರಾಜಕಾರಣ ಮಾಡಿಕೊಂಡು ಬಂದವರು. ಕೃಷಿಯ ಜೊತೆ ರಾಜಕಾರಣ ಮೈಗೂಡಿಸಿಕೊಂಡಿದ್ದ ಬಸಪ್ಪನವರು ಗ್ರಾಮೀಣ ಪ್ರದೇಶದ ಜನರ ಬವಣೆಗಳನ್ನು ಹತ್ತಿರದಿಂದಲೇ ಕಂಡವರು. ಜನರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಜತೆ ಚರ್ಚಿಸಿ, ಪರಿಹರಿಸುವ ಕಾರ್ಯದಲ್ಲಿ ಸದಾ ನಿರತರಾಗಿದ್ದರು ಎಂದು ಹೇಳಿದರು.

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಭವನ ನಿರ್ಮಾಣಕ್ಕೆ ಸರ್ಕಾರಿ ನಿವೇಶನ ಗುರುತಿಸಿ ಮಂಜೂರು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಾ ಪುರಸ್ಕಾರ: ಜೆಇಇ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ರ‍್ಯಾಂಕ್ ಪಡೆದಿರುವ ಮಲೆಯೂರು ಗ್ರಾಮದ ಎಂ.ಡಿ.ಗುರುಸ್ವಾಮಿ-ನೇತ್ರಾವತಿ ದಂಪತಿ ಪುತ್ರ ಎಂ.ಜಿ.ನಾಗದೇವ್, ರಾಷ್ಟ್ರಮಟ್ಟದಲ್ಲಿ ಖೊಖೋ ಪಂದ್ಯಾವಳಿಯಲ್ಲಿ ಸಾಧನೆ ಮಾಡಿರುವ ಸಿದ್ದಯ್ಯನಪುರದ ಚೇತನ್, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 97ರಷ್ಟು ಅಂಕ ಗಳಿಸಿದ ಉತ್ತವಳ್ಳಿ ಗ್ರಾಮದ ಮನೋಜ್ ಅವರಿಗೆ ತಲಾ 10 ಸಾವಿರ ನಗದು, ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಇದೇ ವೇಳೆ ನಗರದ ಸರ್ಕಾರಿಪೇಟೆ ಶಾಲೆಯ 200ಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಗೌರವಾಧ್ಯಕ್ಷರಾದ ಪಡುಗೂರು ಅಡವಿಮಠದ ಶಿವಲಿಂಗೇಂದ್ರ ಸ್ವಾಮೀಜಿ, ನಿವೃತ್ತ ಪ್ರಾಧ್ಯಾಪಕ ಸಾಹಿತಿ ಚಂದ್ರಶೇಖರಯ್ಯ, ಶರಣ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್, ಮಾಜಿ ಎಂಎಲ್‌ಸಿ ಕೆ.ಆರ್.ಮಲ್ಲಿಕಾರ್ಜುನಪ್ಪ, ರಾಜೇಶ್ವರಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಕೆ.ರವಿಕುಮಾರ್, ನಿಕಟಪೂರ್ವ ಅಧ್ಯಕ್ಷ ದುಗ್ಗಟ್ಟಿ ಮಲ್ಲಿಕಾರ್ಜುನಸ್ವಾಮಿ, ಎಂ.ಸಿ.ಬಸಪ್ಪನವರ ಕುಟುಂಬವರ್ಗದವರು, ಅಭಿಮಾನಿಗಳು ಹಾಜರಿದ್ದರು.

20ಸಿಎಚ್‌ಎನ್‌2

ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ಸಹಯೋಗದಲ್ಲಿ ಮಾಜಿ ಶಾಸಕ ಎಂ.ಸಿ.ಬಸಪ್ಪ ಸಮಾಜ ಸೇವಾ ಪ್ರಶಸ್ತಿಯನ್ನು ಪರಿಸರವಾದಿ ಪುಣಜನೂರು ದೊರೆಸ್ವಾಮಿ ಅವರಿಗೆ ಪ್ರದಾನ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ