ಮಾಜಿ ಶಾಸಕ ಎಂ.ಜೆ. ಅಪ್ಪಾಜಿ 6ನೇ ಪುಣ್ಯಸ್ಮರಣೆ

KannadaprabhaNewsNetwork |  
Published : Sep 03, 2026, 01:45 AM IST
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.  | Kannada Prabha

ಸಾರಾಂಶ

ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ 6ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ 6ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಅಭಿಮಾನಿಗಳು ಅಪ್ಪಾಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ನೇತ್ರದಾನ ಶಿಬಿರ ಆಯೋಜಿಸಿತ್ತು. ಪಕ್ಷದ ತಾಲೂಕು ಅಧ್ಯಕ್ಷ ಆರ್. ಕುರುಣಾಮೂರ್ತಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಮುಖಂಡರಾದ ಟಿ. ಚಂದ್ರೇಗೌಡ, ಶಿವಾಜಿರಾವ್ ಗಾಯಕ್ವಾಡ್, ರಘುನಾಥರಾವ್ ಗಿಡ್ಡೆ, ಕರಿಯಪ್ಪ, ಚನ್ನಪ್ಪ, ಹುಚ್ಚಪ್ಪ, ಎನ್. ಕೃಷ್ಣಪ್ಪ, ಎಂ.ಎ ಅಜಿತ್, ಅರುಣ್‌ಕುಮಾರ್, ಮಧುಸೂದನ್, ಧರ್ಮರಾಜ್, ವಿಶಾಲಾಕ್ಷ್ಮಿ, ಭಾಗ್ಯಮ್ಮ ಮಂಜುನಾಥ್, ಸಾವಿತ್ರಿ ಪುಟ್ಟೇಗೌಡ, ಪಾರ್ಥಿಬನ್, ಜಯರಾಂ ಗೊಂದಿ, ಡಿ. ಆನಂದ್, ವೆಂಕಟೇಶ್, ಎ.ಟಿ ರವಿ, ಗುಣಶೇಖರ್, ನಿರಂಜನಗೌಡ, ಉಮೇಶ್(ಜನ್ನಾಪುರ), ಪೇಪರ್ ಸುರೇಶ್, ವೈ.ಕೆ. ಹನುಮಂತಯ್ಯ, ಎನ್. ರಾಮಕೃಷ್ಣ, ಗಿರಿನಾಯ್ಡು, ಮಲ್ಲೇಶ್, ಬಿ.ಜಿ ರಾಮಲಿಂಗಯ್ಯ, ಅಡವೀಶಯ್ಯ, ನರಸಿಂಹಚಾರ್, ರಾಜಶೇಖರ್ ಉಪ್ಪಾರ, ಆಟೋ ಲಕ್ಷ್ಮಣ್, ನಗರಸಭೆ, ಗ್ರಾಮ ಪಂಚಾಯಿತಿ ಸಹಿತ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳ ಸಹಿತ ನೂರಾರು ಮಂದಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತದಾನ ಕೇಂದ್ರದಿಂದ ದಾನಿಗಳ ರಕ್ತ ಸಂಗ್ರಹಿಸಲಾಯಿತು. ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ನೇತ್ರದಾನ ಶಿಬಿರ ನೆರವೇರಿತು. ಅಲ್ಲದೆ ನೇತ್ರದಾನ ಮಹತ್ವ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು. ಜನ್ನಾಪುರ ಡಾ. ಬಿ.ಆರ್. ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಗಾಯನ ನುಡಿನಮನ ನಡೆಯಿತು.

ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ ಅಪ್ಪಾಜಿ ಕುಟುಂಬ ವರ್ಗದವರು ತಾಲೂಕಿನ ಗೋಣಿಬೀಡಿನಲ್ಲಿರುವ ಅಪ್ಪಾಜಿಯವರ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಪ್ರತಿಭಟನೆ
ಅಧ್ಯಾಪಕರು ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು: ಪ್ರೊ.ಡಿ.ಎಸ್.ಪ್ರತಿಮಾ