ಕನ್ನಡಪ್ರಭ ವಾರ್ತೆ ಮಂಗಳೂರು
ಈ ಪ್ರಕರಣದಲ್ಲಿ ಉಳಿದ ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಾಫಾ ಮತ್ತು ಖಲಂದರ್ ಶಾಫಿ ಎಂಬವರನ್ನು ಬುಧವಾರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೊನೆಯ ಆರೋಪಿ ಕಾರು ಚಾಲಕ ಸಿರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಪ್ರಮುಖ ಆರೋಪಿ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್(41) ಮತ್ತು ಆಕೆಯ ಪತಿ, ಆರೋಪಿ ಶೊಯಿಬ್ನನ್ನು ಅಕ್ಟೋಬರ್ 17 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ರೆಹಮತ್ ಮತ್ತು ಆಕೆಯ ಪತಿ ಶೊಯಿಬ್ನನ್ನು ಸೋಮವಾರ ಸಂಜೆ ಕಲ್ಲಡ್ಕದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿ ಮಮ್ತಾಝ್ ಆಲಿ ಅವರ ಸಹೋದರ ಹೈದರ್ ಆಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಖಲಂದರ್ ಶಾಫಿ, ಮುಸ್ತಫಾ, ಶೊಯಿಬ್, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ಕಾವೂರು ಪೊಲೀಸರಿಗೆ ದೂರು ನೀಡಿದ್ದರು.