ಮಾಜಿ ಶಾಸಕ ಸುರೇಶ್‌ಗೌಡರಿಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Apr 07, 2026, 01:45 AM IST
6ಕೆಎಂಎನ್ ಡಿ19 | Kannada Prabha

ಸಾರಾಂಶ

ಕಳೆದ ಫೆ.21ರ ರಾತ್ರಿ ಮದ್ದೂರು ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಾಗಮಂಗಲಕ್ಕೆ ವಾಪಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮಾಜಿ ಶಾಸಕ ಸುರೇಶ್‌ಗೌಡ ಸೇರಿದಂತೆ ಚಾಲಕ ಹಾಗೂ ಅಂಗರಕ್ಷಕ ಗಾಯಗೊಂಡು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಎರಡು ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ನಂತರ ವಿಶ್ರಾಂತಿಯಲ್ಲಿದ್ದ ಮಾಜಿ ಶಾಸಕ ಸುರೇಶ್‌ಗೌಡ ತಮ್ಮ ಪತ್ನಿಯೊಂದಿಗೆ ಎರಡು ತಿಂಗಳ ಬಳಿಕ ತಾಲೂಕಿಗೆ ಸೋಮವಾರ ಭೇಟಿಕೊಟ್ಟ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.

ತಾಲೂಕಿನ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಲಿಗೆರೆ ಟೋಲ್ ಬಳಿ ಕ್ರೇನ್ ಯಂತ್ರದ ಮೂಲಕ ಬೃಹತ್ ಹಾರ ಸುರೇಶ್ ಗೌಡರ ಪರ ಹಾಕಿ ಜಯಘೋಷ ಕೂಗಿದರು. ನಂತರ ಬೈಕ್‌ರ್‍ಯಾಲಿ ಮೂಲಕ ಪಟ್ಟಣಕ್ಕೆ ಕರೆತಂದರು.

ಕಳೆದ ಫೆ.21ರ ರಾತ್ರಿ ಮದ್ದೂರು ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಾಗಮಂಗಲಕ್ಕೆ ವಾಪಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮ ಮಾಜಿ ಶಾಸಕ ಸುರೇಶ್‌ಗೌಡ ಸೇರಿದಂತೆ ಚಾಲಕ ಹಾಗೂ ಅಂಗರಕ್ಷಕ ಗಾಯಗೊಂಡು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೈದ್ಯರ ಸಲಹೆಯಂತೆ ಎರಡು ತಿಂಗಳ ಕಾಲ ವಿಶ್ರಾಂತಿಯಲ್ಲಿದ್ದರು.

ಪಕ್ಷದ ಕಾರ್ಯಕರ್ತರ ಸಮಸ್ಯೆ ಆಲಿಸಲು ಸೋಮವಾರ ಬೆಳಗ್ಗೆ ತಾಲೂಕಿಗೆ ಮಾಜಿ ಶಾಸಕ ಸುರೇಶ್‌ಗೌಡ ಭೇಟಿ ನೀಡುತ್ತಿರುವ ಮಾಹಿತಿ ಸಿಗುತ್ತಿದ್ದಂತೆ ತಾಲೂಕಿನ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಲಿಗೆರೆ ಟೋಲ್ ಬಳಿ ಸೇರಿದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಮಾಜಿ ಶಾಸಕ ಸುರೇಶ್‌ಗೌಡ ಮತ್ತು ಪತ್ನಿ ಗೀತಾ ಸುರೇಶ್‌ಗೌಡ ಅವರಿಗೆ ಕ್ರೇನ್ ಯಂತ್ರದ ಮೂಲಕ ಬೃಹತ್ ಹಾರ ಹಾಕಿ ಜಯಘೋಷದೊಂದಿಗೆ ಅದ್ಧೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ನಂತರ ನೂರಾರು ಬೈಕ್ ರ್‍ಯಾಲಿ ಮೂಲಕ ಬೆಳ್ಳೂರು ಕ್ರಾಸ್ ಮಾರ್ಗವಾಗಿ ಪಟ್ಟಣಕ್ಕೆ ಕರೆತಂದರು.

ಪಟ್ಟಣದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಿಂದ ಟಿ.ಮರಿಯಪ್ಪ ವೃತ್ತದವರೆಗೆ ಸುರೇಶ್‌ಗೌಡ ದಂಪತಿಯನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆತಂದು ಕ್ರೇನ್ ಯಂತ್ರದ ಮೂಲಕ ಬೃಹತ್ ಹಾರ ಹಾಕಿಸಿ ಸ್ವಾಗತ ಕೋರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿ ಸಂಭ್ರಮಿಸಿದರು.

ನಂತರ ಸುರೇಶ್‌ಗೌಡ ದಂಪತಿಯನ್ನು ಮೆರವಣಿಗೆಯಲ್ಲಿ ಕರೆದೊಯ್ದು ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಪೂರ್ಣ ಗುಣಮುಖರಾಗಿ ಜನಸೇವೆ ಮಾಡಲು ಸುರೇಶ್‌ಗೌಡರಿಗೆ ಶಕ್ತಿ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಈ ವೇಳೆ ಮಾಜಿ ಶಾಸಕ ಸುರೇಶ್‌ಗೌಡ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ನಾನು ದೇವರ ಆಶೀರ್ವಾದ ಹಾಗೂ ತಾಲೂಕಿನ ಜನರು ಮತ್ತು ಜೆಡಿಎಸ್ ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದಾಗಿ ಗುಣಮುಖನಾಗಿದ್ದೇನೆ ಎಂದರು.

ಇನ್ನೂ ಎರಡು ವಾರಗಳ ಕಾಲ ಫಿಜಿಯೋ ಥೆರಪಿ ಮಾಡಿಸಬೇಕಿದೆ. ಮೂರ್‍ನಾಲ್ಕು ದಿನಗಳ ನಂತರದಿಂದ ತಾಲೂಕಿನಲ್ಲಿ ಲಭ್ಯವಿದ್ದು ಜೆಡಿಎಸ್ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಜೊತೆಗೆ ವಿರೋಧ ಪಕ್ಷದವರಾಗಿ ಪರಿಪೂರ್ಣ ಕೆಲಸ ಮಾಡಲಾಗುವುದು ಎಂದರು.

ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಚನ್ನಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ನೆಲ್ಲಿಗೆರೆ ಬಾಲು, ಪುರಸಭೆ ಮಾಜಿ ಅಧ್ಯಕ್ಷ ವಿಜಯಕುಮಾರ್(ಪುಂಗ) ಸೇರಿದಂತೆ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೊಮ್ಮೇನಹಳ್ಳಿ ಸುತ್ತಮುತ್ತ ಬೀಡುಬಿಟ್ಟ ಕಾಡಾನೆ ಹಿಂಡು
ಸಿಲಿಂಡರ್‌ ದುರ್ಬಳಕೆ ಕಂಡುಬಂದರೆ ಏಜೆನ್ಸಿ ಮೇಲೆ ಶಿಸ್ತು ಕ್ರಮ