ಚನ್ನರಾಯಪಟ್ಟಣ: ಬಕ್ರೀದ್ ಹಬ್ಬದ ಅಂಗವಾಗಿ ಗುರುವಾರ ನಗರದ ಬಾಗೂರು ರಸ್ತೆಯ ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.ಬೆಳಿಗ್ಗೆ ಸರಿಯಾಗಿ ೯.೧೫ ಕ್ಕೆ ಸಾವಿರಾರು ಮುಸ್ಲಿಂ ಬಾಂಧವರು ಒಂದೆಡೆ ಸೇರಿ ವಿಶೇಷ ನಮಾಜ್ ಮಾಡಿದರು. ನಗರದ ಇತರೆ ಭಾಗಗಳ ಮಸೀದಿ ಗಳಲ್ಲಿಯೂ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ. ಎ. ಗೋಪಾಲಸ್ವಾಮಿ ಮಾತನಾಡಿ, ಸಮಸ್ತ ನಾಗರಿಕ ಬಂಧುಗಳಿಗೆ ಬಕ್ರೀದ್ ಹಬ್ಬದ ತುಂಬು ಹೃದಯದ ಶುಭಾಶಯಗಳು. ಬಕ್ರೀದ್ ಎಂದರೇ ತ್ಯಾಗ ಮತ್ತು ಬಲಿದಾನದ ಸಂಕೇತ ಎಂದರು. ಬಕ್ರೀದ್ ನಿಮಿತ್ತ ಮುಸ್ಲಿಂ ಬಾಂಧವರು ಹೊಸ ಬಟ್ಟೆ ಧರಿಸಿ, ಪರಸ್ಪರ ಆಲಿಂಗನ ಮಾಡಿಕೊಂಡು ಶುಭ ಕೋರಿದರು. ಪೊಲೀಸ್ ಇಲಾಖೆಯಿಂದ ಬಂದೂಬಸ್ತ್ ಏರ್ಪಡಿಸಲಾಗಿತ್ತು.