ಕ್ರೀಡಾಂಗಣ ನಿರ್ಮಾಣಕ್ಕೆಮಾಜಿ ಎಂಎಲ್‌ಸಿ ಗೋಪಾಲಸ್ವಾಮಿ ಒತ್ತಾಯ

KannadaprabhaNewsNetwork |  
Published : May 07, 2026, 01:45 AM IST
6ಎಚ್ಎಸ್ಎನ್15 : ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ   ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ  ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿಯನ್ನು  ಮಾಜಿ ವಿಧಾನ ಪರಿಷತ್ ಸದಸ್ಯ ಎಂಎ ಗೋಪಾಲಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಹೋಬಳಿ ಕೇಂದ್ರದಲ್ಲಿ ಇದೆ ಮೊದಲ ಬಾರಿಗೆ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಇದರ ಜೊತೆಗೆ ಹೋಬಳಿಯ ಮೂಲ ಕ್ರೀಡೆಯಾದ ವಾಲಿಬಾಲ್ ಆಟಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ ಎಲ್ಲಾ ಕ್ರೀಡೆಗಳಿಗೂ ಅವಕಾಶ ಕಲ್ಪಿಸುವ ಸಲುವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಕ್ರೀಡಾ ಸಚಿವರನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸುವುದಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ತಿಳಿಸಿದರು.ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಹೋಬಳಿ ಕೇಂದ್ರದಲ್ಲಿ ಇದೆ ಮೊದಲ ಬಾರಿಗೆ ಹೊಯ್ಸಳ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಇದರ ಜೊತೆಗೆ ಹೋಬಳಿಯ ಮೂಲ ಕ್ರೀಡೆಯಾದ ವಾಲಿಬಾಲ್ ಆಟಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ ಎಲ್ಲಾ ಕ್ರೀಡೆಗಳಿಗೂ ಅವಕಾಶ ಕಲ್ಪಿಸುವ ಸಲುವಾಗಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಕ್ರೀಡಾ ಸಚಿವರನ್ನು ಒತ್ತಾಯಿಸುವುದಾಗಿ ತಿಳಿಸಿದರು.ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ನೀಡುತ್ತಿದೆ ತಾಲೂಕಿನಲ್ಲಿ ಏತ ನೀರಾವರಿ ಯೋಜನೆ ಸೇರಿದಂತೆ ರಸ್ತೆ ಕುಡಿಯುವ ನೀರು ಸಮುದಾಯ ಭವನ ಗ್ರಾಮೀಣಾಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಕಳೆದ ಎರಡುವರೆ ವರ್ಷಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ ನಮಗೆ ರಾಜಕಾರಣದ ಅವಶ್ಯಕತೆ ಇಲ್ಲ ತಾಲೂಕಿನ ಅಭಿವೃದ್ಧಿಯಷ್ಟೇ ಮುಖ್ಯ ಕಳೆದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿದ್ದೇನೆ ಸೋಲನ್ನೇ ಸವಾಲಾಗಿ ಸ್ವೀಕರಿಸಿ ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸದಾ ಸ್ಪಂದಿಸುತ್ತಿದ್ದೇನೆ ತಾಲೂಕಿನ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಎನ್ಎಸ್ ಪ್ರಕಾಶ್, ಬಾಣನಕೆರೆ ಅಶೋಕ್, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಅವೇರಹಳ್ಳಿ ವೇಣು, ನಟರಾಜ್ ಯಾದವ್, ಶಿಕ್ಷಕ ನಂಜುಂಡಿ, ಪ್ರದೀಪ್, ಅಚ್ಚು, ಸೇರದಂತೆ ಹೊಯ್ಸಳ ಕ್ರಿಕೆಟರ್ಸ್ ಸದಸ್ಯರು ಹಾಗೂ ಆಟಗಾರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜೃಂಭಣೆಯಿಂದ ನಡೆದ ಶ್ರೀ ಮದ್ದೂರಮ್ಮನವರ ಅಗ್ನಿಕೊಂಡ ಮಹೋತ್ಸವ
ಡೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿ.ಶಿವಕುಮಾರ್ ಭೂಮಿಪೂಜೆ