ಹಿಂದಿನ ಸಿದ್ದರಾಮಯ್ಯ ಈಗಿಲ್ಲ: ವಿ. ಸೋಮಣ್ಣ

KannadaprabhaNewsNetwork |  
Published : Nov 07, 2024, 11:50 PM IST
5456 | Kannada Prabha

ಸಾರಾಂಶ

ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಇದ್ದೂ ಸತ್ತ ಹಾಗೇ ಸಿದ್ದರಾಮಯ್ಯ ಸರ್ಕಾರ ಆಗಿದೆ. ಅವರು ಪಂಜರದ ಗಿಳಿ ಆಗಿದ್ದಾರೆ. ಮೊದಲಿನ ಹಾಗೆ ಅವರು ಮುಖ್ಯಮಂತ್ರಿಯಾಗಿ ಉಳಿದಿಲ್ಲ.

ಹುಬ್ಬಳ್ಳಿ:

ಹಿಂದಿನ ಸಿದ್ದರಾಮಯ್ಯ ಈಗ ಉಳಿದಿಲ್ಲ. ಅವರಿಂದ ರಾಜ್ಯಕ್ಕೆ ಒಳಿತಾಗಲಿದೆ ಎಂಬ ವಿಶ್ವಾಸವೂ ನನಗಿಲ್ಲ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಅದು ತನ್ನದೆಯಾದ ಕೆಲಸ ಮಾಡುತ್ತದೆ ಎಂದು ಕೇಂದ್ರದ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಉಪ ಚುನಾವಣೆಯಲ್ಲಿ ಸರ್ಕಾರದ ಆಟಾಟೋಪ ನಡೆಯಲ್ಲ. ಜನ ರಾಜ್ಯ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ರಾಜ್ಯಕ್ಕೆ ಜೆಪಿಸಿ ತಂಡ ಆಗಮಿಸುತ್ತಿರುವುದೇ ಅನಧಿಕೃತ ಎಂಬ ವಕ್ಫ್ ಸಚಿವ ಜಮೀರ್ ಅಹಮದ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೊದಲು ಅವರು ಕಾನೂನು ಅರಿತುಕೊಳ್ಳಲಿ. ಈ ರೀತಿಯಾಗಿ ಏಕೆ ಹೇಳಿಕೆ ಕೊಟ್ಟರೋ ಗೊತ್ತಾಗುತ್ತಿಲ್ಲ. ಅವರಿಗೆ ಮುಸ್ಲಿಮರು ಮಾತ್ರ ಮತ ಹಾಕಿಲ್ಲ. ಎಲ್ಲರೂ ಹಾಕಿದ್ದಾರೆ. ಅವರು ಮೊದಲು ಮಂತ್ರಿ ಕೆಲಸ ಮಾಡಲಿ. ಅದನ್ನು ಬಿಟ್ಟು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಪಂಜರದ ಗಿಳಿಯಾಗಿದ್ದಾರೆ:

ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಇದ್ದೂ ಸತ್ತ ಹಾಗೇ ಸಿದ್ದರಾಮಯ್ಯ ಸರ್ಕಾರ ಆಗಿದೆ. ಅವರು ಪಂಜರದ ಗಿಳಿ ಆಗಿದ್ದಾರೆ. ಮೊದಲಿನ ಹಾಗೆ ಅವರು ಮುಖ್ಯಮಂತ್ರಿಯಾಗಿ ಉಳಿದಿಲ್ಲ. ಸ್ವಇಚ್ಛೆಯಿಂದ ಒಂದೇ ಒಂದು ಸಣ್ಣ ಅಭಿವೃದ್ಧಿ ಕಾರ್ಯ ಮಾಡಲು ಆಗುತ್ತಿಲ್ಲ. ಹೀಗಾಗಿ ಉಪ ಚುನಾವಣೆ ನಂತರ ಈ ಸರ್ಕಾರ ಇರುತ್ತದೆ ಎಂಬ ನಂಬಿಕೆ ಇಲ್ಲ ಎಂದರು.

ರಾಷ್ಟ್ರಕ್ಕೆ ಬಸವರಾಜ ಬೊಮ್ಮಾಯಿ ಅವಶ್ಯಕತೆ ಇದೆ ಎಂದು ನರೇಂದ್ರ ಮೋದಿ ಅವರು ಅಪೇಕ್ಷೆ ಮೇರೆಗೆ ಅವರು ಸಂಸದರಾಗಿದ್ದು, ಅವರ ಮಗನನ್ನು ಶಿಗ್ಗಾಂವಿ ಕ್ಷೇತ್ರಕ್ಕೆ ನಿಲ್ಲಿಸಲಾಗಿದೆ. ಮಾಜಿ ಸಿಎಂ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಈ ಹಿಂದೆ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಧಾನಿ ಮೋದಿ ಅವರು ಕೈಗೊಂಡ ಕಾರ್ಯಗಳು ಗೆಲುವಿಗೆ ಸಹಕಾರಿ ಆಗಲಿದೆ. ಮೂರು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ