ಸರ್ಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!

KannadaprabhaNewsNetwork |  
Published : Sep 20, 2024, 01:43 AM ISTUpdated : Sep 20, 2024, 01:44 AM IST
ಶಾಸಕ ಡಾ.ಭರತ್‌ ಶೆಟ್ಟಿ ಶಂಕುಸ್ಥಾಪನೆ ನೆರವೇರಿಸುತ್ತಿರುವುದು | Kannada Prabha

ಸಾರಾಂಶ

ಉದ್ಯಮಿ ಕೇಶವ ಅಮೀನ್ ಮಾತನಾಡಿ, ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ನನಗೆ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ನಾನು ಕಲಿತ ಶಾಲೆ ಮತ್ತು ನನ್ನೂರಿಗೆ ಕೊಡಬಹುದಾದ ಕೊಡುಗೆ. ಶಾಲೆಯ ಎಲ್ಲ ಹಳೆ ವಿದ್ಯಾರ್ಥಿಗಳು ನಮ್ಮ ಜೊತೆ ಕೈಜೋಡಿಸಿ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ಇದರ ನೂತನ ಕಟ್ಟಡದ ಶಂಕುಸ್ಥಾಪನೆ ಬುಧವಾರ ನಡೆಯಿತು. ಕೊಡುಗೈ ದಾನಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್ ಅವರು ಅಂದಾಜು 1 ಕೋಟಿ ರು. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಕಾರ್ಯಕ್ರಮ ನೆರವೇರಿಸಿ ಮಾತಾಡಿದರು.

ಸರ್ಕಾರಿ ಶಾಲೆಗಳು ಮಕ್ಕಳಿಲ್ಲದೆ ಸುಸಜ್ಜಿತ ಕಟ್ಟಡ ಮತ್ತು ಮೂಲಭೂತ ಸೌಲಭ್ಯವಿಲ್ಲದೆ ಬರಡಾಗುತ್ತಿರುವ ಈ ಸಂದರ್ಭದಲ್ಲಿ ಕೇಶವ ಅಮೀನ್ ಅವರು ತಾವು ಕಲಿತ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ವಿಚಾರ. ಅವರು 7 ಕೊಠಡಿಗಳ ನಿರ್ಮಾಣಕ್ಕೆ ಅಂದಾಜು 1 ಕೋಟಿ ರು. ದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದರು. ಉದ್ಯಮಿ ಕೇಶವ ಅಮೀನ್ ಮಾತನಾಡಿ, ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ನನಗೆ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದು ನಾನು ಕಲಿತ ಶಾಲೆ ಮತ್ತು ನನ್ನೂರಿಗೆ ಕೊಡಬಹುದಾದ ಕೊಡುಗೆ. ಶಾಲೆಯ ಎಲ್ಲ ಹಳೆ ವಿದ್ಯಾರ್ಥಿಗಳು ನಮ್ಮ ಜೊತೆ ಕೈಜೋಡಿಸಿ ಎಂದರು.ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹೊ, ಕಾರ್ಪೋರೇಟರ್ ಸುಮಂಗಲಾ ರಾವ್, ಸಿಆರ್‌ಪಿ ದೀಪಿಕಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ, ಕಾರ್ಯದರ್ಶಿ ವಿಕೇಶ್ ಮತ್ತು ಲಾವಣ್ಯ ಶೆಟ್ಟಿ, ವಕೀಲ ಗುರುಪ್ರಸಾದ್, ನಿವೃತ್ತ ಮುಖ್ಯ ಶಿಕ್ಷಕಿ ಚಂದ್ರಾವತಿ, ನಿವೃತ್ತ ಮುಖ್ಯ ಶಿಕ್ಷಕ ಸುರೇಂದ್ರನಾಥ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಭುಜಂಗ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಕ್ಷ್ಮಣ ಛಲವಾದಿ, ಪದಾಧಿಕಾರಿಗಳಾದ ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ, ಸಮಾಜ ಸೇವಕ ಹಸನಬ್ಬ, ಪೆಲ್ಸಿ ರೇಗೋ ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಾಕರ್‌ ಇದ್ದರು. ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!