ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ಪುರಸಭೆ ಕಚೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಪುರಸಭೆಯ ಸಾಮಾನ್ಯ ಸಭೆ ಹಾಗೂ ಸರ್ಕಾರಿ ತಾಲೂಕು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ವಸತಿ ಮನೆ ಇಲ್ಲದ ನಿಜವಾದ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಗಳ ಲಾಭ ಸಿಗಬೇಕು ಎಂದು ಸಲಹೆ ನೀಡಿದರು.
ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ, ನಗರೋತ್ಥಾನ ಯೋಜನೆಯಡಿಯಲ್ಲಿ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ, ಸದಸ್ಯರು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳಪೆ ರಸ್ತೆಗಳು ನಿರ್ಮಾಣವಾಗಿವೆ. ಬಹುತೇಕ ಸಿಸಿ ರಸ್ತೆಗಳನ್ನು ಗುತ್ತಿಗೆದಾರರು ಅವೈಜ್ಞಾನಿಕ ಹಾಗೂ ಕಳಪೆಯಾಗಿ ನಿರ್ಮಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರ ಹಾಗೂ ಹಲವು ಸದಸ್ಯರು ಆರೋಪಿಸಿದ್ದಾರೆ. ಸರ್ಕಾರಿ ಎಸ್ಟಿಮೇಟ್ ಪ್ರಕಾರ ರಸ್ತೆಗಳ ಕಾಮಗಾರಿ ನಡೆಸಲಿ. ಇಲ್ಲದಿದ್ದರೆ ಬಿಟ್ಟು ಹೋಗಲಿ ಎಂದು ಎಚ್ಚರಿಸಿದರು. ಅಲ್ಲದೇ, ಕೆಲವರು ನಾಡಗೌಡರು ರಸ್ತೆ ಕಾಮಗಾರಿ ನಡೆಸದಂತೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಸುಖಾಸುಮ್ಮನೆ ಆರೋಪಿಸಿದ್ದು, ಇದೆಲ್ಲ ಸರಿಯಲ್ಲ ಎಂದು ಎಚ್ಚರಿಸಿದರು.ಈ ವೇಳೆ ಪುರಸಭೆ ನಾಮನಿರ್ದೇಶಿತ ಸದಸ್ಯ ಗೋಪಿ ಮಡಿವಾಳ ಹಾಗೂ ಸದಸ್ಯರಾದ ಹಣಮಂತ ಭೋವಿ, ವಿರೇಶ ಹಡಲಗೇರಿ ಮಾತನಾಡಿ, ಬೇರೆ ಬೇರೆ ಊರುಗಳಿಂದ ಬಂದು ಪಟ್ಟಣದಲ್ಲಿ ನೆಲೆಸಿರುವ ಸ್ಥಳೀಯರಲ್ಲದವರಿಗೆ ಆಶ್ರಯ ಕಮಿಟಿಗೆ ತಿಳಿಸದೆಯೇ ವಿಜಯಪುರ ಸ್ಲಂ ಬೋರ್ಡ್ ಅಧಿಕಾರಿಗಳು ಮನೆ ಹಂಚಿಕೆ ಮಾಡಿದ್ದಾರೆ. ಇದರಿಂದ ನಿಜವಾದ ಬಡ ಕುಟುಂಬಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಇದಕ್ಕೆ ಶಾಸಕ ನಾಡಗೌಡರು ಮಧ್ಯೆ ಪ್ರವೇಶಿಸಿ ಯಾಕೆ ಹೀಗೆ ಮಾಡಿದ್ದೀರಿ ಎಂದು ಸ್ಲಂ ಬೋರ್ಡ್ ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ನಿಮ್ಮ ಮೇಲೆ ಈಗಾಗಲೇ ಸಾಕಷ್ಟು ಆರೋಪಗಳು ಕೇಳಿಬಂದಿದ್ದು, ಈಗಾಗಲೇ ನೀಡಿರುವ ಅನಧಿಕೃತ ಹಕ್ಕು ಪತ್ರಗಳನ್ನು ಈ ಕೂಡಲೇ ರದ್ದು ಪಡಿಸಿ, ನೈಜ ಫಲಾನುಭವಿಗಳಿಗೆ ನೀಡಿ ಎಂದು ಸೂಚಿಸಿದರು.
ಇನ್ನು, ವಾಣಿಜ್ಯ ತೆರಿಗೆ ಭರಿಸುವವರ ಬಗ್ಗೆ ಒಂದು ದಿನವೂ ಮಾಹಿತಿ ನೀಡುತ್ತಿಲ್ಲ. ಮಾಹಿತಿ ನೀಡದೆ ಪುರಸಭೆ ವ್ಯಾಪ್ತಿಯಲ್ಲಿನ ಗೂಡಂಗಡಿಗಳನ್ನು ದಿಢೀರ್ ತೆರವು ಮಾಡಿದ್ದೀರಿ. ಆದರೆ, ಪುರಸಭೆ ಕಚೇರಿ ಪಕ್ಕದಲ್ಲಿ ಕಚೇರಿ ಜಾಗ ಕಬಳಿಸಿ ಕಟ್ಟಿದ ಕಟ್ಟಡವನ್ನು ಯಾಕೆ ತೆರವುಗೊಳಿಸಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು. ಅದಕ್ಕೆ, ಉತ್ತರಿಸಿದ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ನಾವು ಯಾರ ಬಗ್ಗೆಯೂ ಬೇಧಭಾವ ಮಾಡಿಲ್ಲ. ನಮ್ಮ ವ್ಯಾಪ್ತಿಗೆ ಬಂದಿರುವ ಎಲ್ಲವನ್ನು ಉಳಿಸಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶವಿದೆ. ಅದರಂತೆ ಈ ಕಟ್ಟಡದ ಬಗ್ಗೆಯೂ ಸಿಟಿ ಸರ್ವೇ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೇಳಲಾಗಿದೆ. ಮಾಹಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದರು.
ಒಟ್ಟು ₹ 27 ಕೋಟಿ ವೆಚ್ಚದಲ್ಲಿ 15ನೇ ಹಣಕಾಸು ಯೋಜನೆಯಡಿ ಸರ್ಕಾರದಿಂದ ಬಿಡುಗಡೆಗೊಂಡ ವಿಶೇಷ ಅನುದಾನದಲ್ಲಿ ಪಟ್ಟಣದ ಕೆರೆ ಅಭಿವೃದ್ಧಿ, ವಿವಿಧ ಕಡೆಗಳಲ್ಲಿ ಬಸ್ ನಿಲ್ದಾಣ, ರಸ್ತೆಗಳ ಅಗಲಿಕರಣ, ಸಂತೆ ಬಜಾರ, ವಾಣಿಜ್ಯ ಮಳಿಗೆಗಳ ನಿರ್ಮಾಣ, ಒಳಚರಂಡಿ ನಿರ್ವಹಣೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕುರಿತು ಚರ್ಚಿಸಿ ಸರ್ವಸದಸ್ಯರ ಠರಾವು ಪಾಸ್ ಮಾಡಲಾಯಿತು.
4ಎಂಬಿಎಲ್1 ಮುದ್ದೇಬಿಹಾಳ ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಶುಕ್ರವಾರ ಸಂಜೆ ನಡೆದ ತಾಲೂಕಾ ವಿವಿಧ ಸರಕಾರಿ ಅಧಿಕಾರಿಗಳ ಹಾಗೂ ಪುರಸಭೆ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ)ಬಾಗವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಕನ್ನಡಪ್ರಭ ವರದಿ ಬಗ್ಗೆ ಪ್ರಸ್ತಾಪ