ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಯಚೂರು ಮಹಾನಗರ ಪಾಲಿಕೆ ಹಾಗೂ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಬರುವ ದಿನಗಳಲ್ಲಿ ಹೆಚ್ಚಾಗುವ ನಗರದ ಜನಸಂಖ್ಯೆಗೆ ಅನುಗುಣವಾಗಿ ಕುಡಿಯುವ ನೀರು, ಘನ ತ್ಯಾಜ್ಯ ವಿಲೇವಾರಿಗೆ ಸೂಕ್ತ ಯೋಜನೆಯನ್ನು ರೂಪಿಸಬೇಕು. ರಾಯಚೂರು ನಗರದಲ್ಲಿ 3.5 ಲಕ್ಷ ಜನಸಂಖ್ಯೆಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ಭವಿಷ್ಯದಲ್ಲಿ ಬೇಡಿಕೆ ಹೆಚ್ಚಳವಾಗುವದನ್ನು ಸಹ ಪರಿಗಣಿಸಬೇಕೆಂದರು. ನಗರದಲ್ಲಿ 52 ಎಂಎಲ್ಡಿ ನೀಡಿನ ಪೂರೈಕೆ ಯಾಗುತ್ತಿದ್ದು, 90 ಎಂಎಲ್ಡಿ ಬೇಡಿಕೆಯಿದೆ ಎಂದರು.
ನೀರು, ಘನತ್ಯಾಜ್ಯ ವಿಲೇವಾರಿ ಹಾಗೂ ಇನ್ನಿತರೆ ಮೂಲಭೂತ ಸೌಕರ್ಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ನಗರಗಳು ತೀವ್ರವಾಗಿ ಬೆಳೆಯುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅನುಕೂಲವಾಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಪ್ರಸ್ತುತ ಮಹಾನಗರ ಪಾಲಿಕೆಯ ಜನಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ. ಅವರಿಗೆ ಕುಡಿವ ನೀರು ಮತ್ತು ಘನ ತ್ಯಾಜ್ಯ ವಿಲೇಜ್ ವಿಲೇವಾರಿ ಮೂಲಭೂತ ಸುಗಮವಾಗಿ ಸೌಕರ್ಯಗಳು ದೊರೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಗಣೇಕಲ್ ಜಲಾಶಯದಿಂದ ಕುಡಿಯುವ ನೀರು ಪಡೆಯುವ ಬದಲು ಗುರ್ಜಾಪುರ ಜಲಾಶಯದಿಂದ ನಗರಕ್ಕೆ ಕುಡಿಯುವ ನೀರು ಪಡೆಯುವ ಯೋಜನೆ ರೂಪಿಸಬೇಕು. ಗಣೇಕಲ್ ಜಲಾಶಯದ ನೀರು ಪಡೆಯಲು ರೈತರ ಒತ್ತಡದ ಹಿನ್ನಲೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದರು.
ಎಂಎಲ್ಸಿ ವಸಂತ ಕುಮಾರ ಮಾತನಾಡಿ, ದೇವಸೂಗೂರು, ಚಿಕ್ಕಸೂಗೂರು ನೀರಿನ ಶುದ್ದೀಕರಣ ಘಟಕಗಳು ಸ್ಥಗಿತಗೊಂಡಿದ್ದು, ನವೀಕರಣ ಕೈಗೊಂಡು ನೀರಿನ ಪೂರೈಕೆ ಪ್ರಮಾಣ ಹೆಚ್ಚಿಸುವ ಅವಕಾಶಗಳನ್ನು ಪಾಲಿಕೆ ಬಳಸಿಕೊಳ್ಳಬೇಕೆಂದರು.
ಮಾವಿನ ಕೆರೆ ಅಭಿವೃದ್ಧಿಗಾಗಿ ಈಗಾಗಲೇ ಕಾಮಗಾರಿಯು ಪ್ರಗತಿಯಲ್ಲಿದೆ. 15ನೇ ಹಣಕಾಸು ಆಯೋಗದ ವತಿಯಿಂದ 67.72 ಕೋಟಿ ರು.ಗಳನ್ನು ಬಿಡುಗಡೆ ಮಾಡಲಾಗಿದೆ. ಎಸ್.ಎಫ್.ಸಿ/ ಎಸ್.ಸಿ.ಎಸ್.ಪಿ, ಟಿಎಸ್.ಪಿ ವತಿಯಿಂದ 20.58 ಕೋಟಿ ರು. ಬಿಡುಗಡೆ ಮಾಡಲಾಗಿದ್ದು, ಶೇ.97.2ರಷ್ಟು ಅನುದಾನ ಬಳಕೆ ಮಾಡಲಾಗಿದೆ ಎಂದರು.
ಮಹಾನಗರ ಪಾಲಿಕೆಯ ಸ್ವಸಹಾಯ ಸಂಘದ ಮಹಿಳೆಯರಿಂದ ವೆಸ್ಟ್ ಪೇಪರ್ನಿಂದ ಮನೆಯ ಸೌಂದರ್ಯಕರಣಕ್ಕೆ ಬೇಕಾಗುವ ಸಾಮಾಗ್ರಿಗಳನ್ನು ತಯಾರಿಸ ಲಾಗಿದ್ದ ವಿವಿಧ ಕಲಾಕೃತಿಯನ್ನು ಸಚಿವರು ವೀಕ್ಷಿಸಿದರು. ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ನಿಮ್ಮ ಬಾಗಿಲಿಗೆ ಮಹಾನಗರ ಪಾಲಿಕೆ ಕಂದಾಯ ಅದಾಲತ್ ಹಂತ-2 ಕಾರ್ಯಕ್ರಮಕ್ಕೆ ಡಿಜಿಟಲ್ ಲಾಗಿನ್ ಮೂಲಕ ಚಾಲನೆ ನೀಡಿ, ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಇ-ಖಾತಾ ವಿತರಿಸಿದರು. ಮತ್ತು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸಮವಸ್ತ್ರದ ಕಿಟ್ಗಳನ್ನು ಸಚಿವರು ಸೇರಿದಂತೆ ವಿವಿಧ ಗಣ್ಯರು ವಿತರಿಸಿದರು.