ಬೈಕ್‌ಗಳನ್ನು ಜಖಂಗೊಳಿಸಿದ ಫಾರ್ಚೂನರ್ ವಾಹನ

KannadaprabhaNewsNetwork |  
Published : Aug 20, 2024, 12:46 AM IST
ಕೆಂಕೆರೆಹಳ್ಳಿ ಗೇಟ್ ಬಳಿ ಫಾರ್ಚುನರ್ ವಾಹನದ ನಿಯಂತ್ರಣ ತಪ್ಪಿ 17 ಬೈಕ್ಗಳ ಮೇಲೆ ಹತ್ತಿ ಬೈಕ್ ಗಳು ಜಕಮ್ | Kannada Prabha

ಸಾರಾಂಶ

ಅರಸೀಕೆರೆ ತಾಲೂಕಿನ ಕೆಂಕೆರೆಹಳ್ಳಿ ಗೇಟ್ ಬಳಿ ಫಾರ್ಚುನರ್ ವಾಹನದ ನಿಯಂತ್ರಣ ತಪ್ಪಿ 17 ಬೈಕ್‌ಗಳ ಮೇಲೆ ಹತ್ತಿ ಬೈಕ್‌ಗಳು ಜಖಂ ಆಗಿರುವ ಘಟನೆ ನಡೆದಿದೆ. ತುಂಬಾ ಮಳೆ ಇದ್ದ ಕಾರಣ ಬೈಕ್ ಸವಾರರು ತಮ್ಮ ದ್ವಿಚಕ್ರ ವಾಹನಗಳನ್ನು ಕೆಂಕೆರೆಹಳ್ಳಿ ಗೇಟ್ ಸಮೀಪದ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿ ಬಸ್ ನಿಲ್ದಾಣದ ಒಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಜಾವಗಲ್ ಮಾರ್ಗದಿಂದ ಬಾಣಾವರದ ಕಡೆಗೆ ಹೋಗುತ್ತಿದ್ದ ಫಾರ್ಚುನರ್‌ ವಾಹನವು ಚಾಲಕನ ನಿಯಂತ್ರಣ ತಪ್ಪಿ ಅಲ್ಲಿ ನಿಲ್ಲಿಸಿದ್ದ ಬೈಕ್‌ಗಳ ಮೇಲೆ ಹತ್ತಿದ ಪರಿಣಾಮ ಅಲ್ಲಿದ್ದಂತಹ 17 ಬೈಕುಗಳು ಜಖಂಗೊಂಡಿವೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಬಾಣಾವರದ ಸಮೀಪದ ಕೆಂಕೆರೆಹಳ್ಳಿ ಗೇಟ್ ಬಳಿ ಫಾರ್ಚುನರ್ ವಾಹನದ ನಿಯಂತ್ರಣ ತಪ್ಪಿ 17 ಬೈಕ್‌ಗಳ ಮೇಲೆ ಹತ್ತಿ ಬೈಕ್‌ಗಳು ಜಖಂ ಆಗಿರುವ ಘಟನೆ ನಡೆದಿದೆ.

ತುಂಬಾ ಮಳೆ ಇದ್ದ ಕಾರಣ ಬೈಕ್ ಸವಾರರು ತಮ್ಮ ದ್ವಿಚಕ್ರ ವಾಹನಗಳನ್ನು ಕೆಂಕೆರೆಹಳ್ಳಿ ಗೇಟ್ ಸಮೀಪದ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿ ಬಸ್ ನಿಲ್ದಾಣದ ಒಳಗೆ ನಿಂತಿದ್ದರು. ಈ ಸಂದರ್ಭದಲ್ಲಿ ಜಾವಗಲ್ ಮಾರ್ಗದಿಂದ ಬಾಣಾವರದ ಕಡೆಗೆ ಹೋಗುತ್ತಿದ್ದ ಫಾರ್ಚುನರ್‌ ವಾಹನವು ಚಾಲಕನ ನಿಯಂತ್ರಣ ತಪ್ಪಿ ಅಲ್ಲಿ ನಿಲ್ಲಿಸಿದ್ದ ಬೈಕ್‌ಗಳ ಮೇಲೆ ಹತ್ತಿದ ಪರಿಣಾಮ ಅಲ್ಲಿದ್ದಂತಹ 17 ಬೈಕುಗಳು ಜಖಂಗೊಂಡಿವೆ.ಅಲ್ಲದೆ ಬಸ್ ನಿಲ್ದಾಣದ ಗೋಡೆಗೆ ಫಾರ್ಚುನರ್ ವಾಹನ ಗುದ್ದಿದ ರಭಸಕ್ಕೆ ಗೋಡೆ ಬಿದ್ದು ಹೋಗಿದ್ದು ಒಬ್ಬರಿಗೆ ಗಾಯವಾಗಿದೆ. ಅದೃಷ್ಟವಶಾತ್ ಮಹಾ ದುರಂತ ಒಂದು ತಪ್ಪಿದಂತಾಗಿದೆ. ಈ ಕುರಿತು ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನರಾಯಪಟ್ಟಣದಲ್ಲಿ ವಿಶ್ವ ಮಹಿಳಾ ದಿನಾಚರಣೆ
ಸಾಹಿತ್ಯದ ಮೂಲಕ ಜಗತ್ತಿಗೆ ಕೊಡುಗೆ ನೀಡಿದ ಜೈನಧರ್ಮ: ಪ್ರೊ. ಶಾಂತಿನಾಥ ದಿಬ್ಬದ