ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ದೇವನಹಳ್ಳಿ ಚನ್ನರಾಯಪಟ್ಟಣದ ಭೂಸ್ವಾಧೀನದ ಹೋರಾಟ, 1198 ದಿನಗಳ ಕಾಲ ನಡೆಯಿತು. 1777 ಎಕರೆ ರೈತರ ಜಮೀನನ್ನು ಕೆಐಎಡಿಬಿಗೆ ನೋಟೀಫಿಕೇಷನ್ ಮಾಡಿದ್ದನ್ನು ವಿರೋಧಿಸಿ, ಈ ಹೋರಾಟ ನಡೆದಿತ್ತು. ಈ ಹೋರಾಟಕ್ಕೆ ಕಾರ್ಮಿಕ, ದಲಿತ, ಪ್ರಗತಿಪರರು, ಸಿನಿಮಾ ನಟರು, ಕಲಾವಿದರು, ಬೆಂಬಲ ವ್ಯಕ್ತಪಡಿಸಿದ್ದರು. ಸರ್ಕಾರ ಹೋರಾಟಕ್ಕೆ ಮಣಿದು ಸ್ವತಃ ಮುಖ್ಯಮಂತ್ರಿಗಳೇ ನೋಟಿಫಿಕೇಷನ್ ಮಾಡಿದ್ದನ್ನು ಕೈಬಿಟ್ಟಿದ್ದಾರೆ. ಇದು ಹೋರಾಟದ ಫಲವಾಗಿದೆ. ಹಾಗಾಗಿ ಈ ಜಯವನ್ನು ಇಲ್ಲಿಯವರೆಗೆ ಹೋರಾಟದಲ್ಲಿ ಹುತಾತ್ಮರಾದ ಎಲ್ಲ ರೈತರಿಗೆ ಅರ್ಪಣೆ ಮಾಡಲಾಗುವುದು ಎಂದರು.
ಜು.21 ರಂದು ನಡೆಯುವ ರೈತ ಹುತಾತ್ಮ ದಿನಾಚರಣೆಯ ಜತೆಗೆ ಬೃಹತ್ ಸಭೆ ಕೂಡ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ರೈತರ ಜ್ವಲಂತ ಸಮಸ್ಯೆಗಳನ್ನು ಇಟ್ಟುಕೊಂಡು ಚರ್ಚಿಸಲಾಗುವುದು.ಉತ್ತರ ಕರ್ನಾಟಕದ ಭಾಗದಲ್ಲಿ ನೀರಾವರಿ ಯೋಜನೆಯಾದ ಮಹದಾಯಿ ಯೋಜನೆ ಜಾರಿಯಾಗಬೇಕು. ಆಲಮಟ್ಟಿ ಜಲಾಶಯವನ್ನು ಎತ್ತರಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ಹಣ ಬಿಡುಗಡೆ ಮಾಡಬೇಕು. ಸಮಗ್ರ ನೀರಾವರಿ ಯೋಜನೆ ಜಾರಿಮಾಡಬೇಕು. ರೈತ ವಿರೋಧಿ, ಮೂರು ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯಬೇಕು, ಅತಿವೃಷ್ಟಿ, ಅನಾವೃಷ್ಟಿಗೆ ವೈಜ್ಞಾನಿಕ ಪರಿಹಾರ ನೀಡಬೇಕು. ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು, ಗೊಬ್ಬರದ ಬೆಲೆ ಏರಿಕೆ ತಡೆಯಬೇಕು. ಬೆಳೆವಿಮೆ ತಿದ್ದುಪಡಿ ಮಾಡಬೇಕು. ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹರಿಸಬೇಕು ಎಂಬುದು ಸೇರಿದಂತೆ ಸುಮಾರು 19ಕ್ಕೂ ಹೆಚ್ಚು ರೈತರ ಸಮಸ್ಯೆಗಳನ್ನು ಈ ಸಭೆಗಳಲ್ಲಿ ಚಿರ್ಚಿಸಿ, ಮುಂದಿನ ಹೋರಾಟದ ರೂಪುರೇಷಗಳನ್ನು ನಿರ್ಧರಿಸಲಾಗುವುದು ಎಂದರು.
ರೈತಸಂಘದ ಪದಾಧಿಕಾರಿಗಳಾದ ಹಿಟ್ಟೂರು ರಾಜು, ಪಿ. ಶೇಖರಪ್ಪ, ಎಂ.ಮಹಾದೇವಪ್ಪ, ಎಂ.ಡಿ.ನಾಗರಾಜ್, ಸಿ.ಬಿ.ಹನುಮಂತಪ್ಪ, ಚಂದ್ರಪ್ಪ, ಶಿವಕುಮಾರ್, ರವೀಂದ್ರ ಇದ್ದರು.