ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣಕ್ಕೆ ಅಡಿಪಾಯ:ಈರಣ್ಣ ಕಡಾಡಿ

KannadaprabhaNewsNetwork |  
Published : Jul 24, 2024, 12:19 AM IST
ರಾಜ್ಯಸಭಾ ಸಂಸದ ಈರಣ್ಣ ಕಡಾಡಿ | Kannada Prabha

ಸಾರಾಂಶ

ಮೂಡಲಗಿ: ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.

ಮೂಡಲಗಿ: ರೈತರು, ಯುವಕರಿಗೆ, ಮಹಿಳೆಯರಿಗೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸಲು, ಹೊಸ ಭರವಸೆ, ಅವಕಾಶಗಳನ್ನು ಸೃಷ್ಟಿಸುವ, ಸದೃಢ, ಸಶಕ್ತ ವಿಕಸಿತ, ವಿಕಸಿತ ಭಾರತ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರದ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.

ಬಜೆಟ್‌ ಮುಂದಿನ 5 ವರ್ಷಗಳ ದಿಕ್ಸೂಚಿ ಬಜೆಟ್ ಆಗಿದ್ದು, 2047 ರಲ್ಲಿ ವಿಕಸಿತ ಭಾರತದ ಕನಸನ್ನು ನನಸಾಗಿಸುವ ಅಡಿಪಾಯ ಹಾಕುತ್ತದೆ.ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜಾನ, ಹಾಗೂ ಮೂಲ ಸೌಕರ್ಯ, ಗ್ರಾಮೀಣ ಅಭಿವೃದ್ದಿಗೆ ಪೂರಕವಾಗಿದೆ.

ರೈತರ ಮೇಲೆ ಹೆಚ್ಚಿನ ಗಮನ ಹರಿಸಿರುವ ಮೋದಿ ಸರ್ಕಾರ ಕೃಷಿ ಮತ್ತು ಕೃಷಿ ಸಂಬಂಧಿಸಿರುವ ವಲಯಕ್ಕೆ ₹1.52 ಲಕ್ಷ ಕೋಟಿ ಅನುದಾನ ನೀಡಿದೆ. ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್‌, ಸಾವಯವ ಕೃಷಿ, ಹಳ್ಳಿಗಳ ಅಭಿವೃದ್ಧಿಗೆ ಒತ್ತು, ಡಿಜಿಟಲ್ ಭೂ ಆಧಾರ್ ಯೋಜನೆ ಘೋಷಣೆ, ಗ್ರಾಮೀಣ ಭಾಗದಲ್ಲಿ ಭೂ ಸುಧಾರಣೆಗೆ ಹೆಜ್ಜೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3 ಕೋಟಿ ಹೊಸ ಮನೆಗಳ ನಿರ್ಮಾಣ, .ಗ್ರಾಮೀಣ ಅಭಿವೃದ್ಧಿಗೆ ₹ 2.66 ಲಕ್ಷ ಕೋಟಿ ನೀಡಿರುವುದು ಗಮನಾರ್ಹ.

ಎಸ್‌ಸಿ, ಎಸ್‌ಟಿ ಕುಶಲ ಕರ್ಮಿಗಳಿಗೆ ವಿಶೇಷ ಆದ್ಯತೆ, ಮುದ್ರಾ ಯೋಜನೆಗೆ ₹10 ಲಕ್ಷದಿಂದ ₹20 ಲಕ್ಷವರೆಗೆ ಸಾಲ ಹೆಚ್ಚಳ, ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ₹10 ಲಕ್ಷವರೆಗೆ ಸಾಲ ಸೌಲಭ್ಯ,ಪ್ರ ತಿ ವರ್ಷ 1 ಕೋಟಿ ವಿದ್ಯಾರ್ಥಿಗಳಿಗೆ ನೇರ ಸಾಲ ಸೌಲಭ್ಯ, ಪಿಎಂ ಸೂರ್ಯ ಘರ್ ಯೋಜನೆಯಡಿ 1 ಕೋಟಿ ಮನೆಗಳಿಗೆ 300 ಯೂನಿಟ್ ಉಚಿತ ವಿದ್ಯುತ್, ಒಂದು ಕೋಟಿ ಯುವಕರಿಗೆ 500 ದೊಡ್ಡ ಕಂಪನಿಗಳಲ್ಲಿ ಇಂಟರ್ನ್‌ಶಿಫ್, ಯುವಕರಿಗೆ 12 ತಿಂಗಳು ತರಬೇತಿ ಜೊತೆಗೆ ತಿಂಗಳಿಗೆ ₹5 ಸಾವಿರ ವೇತನ ನೀಡುವುದು, ಟಿಡಿಎಸ್ ಕಡಿಮೆಗೊಳಿಸಿರುವುದು ಸೇರಿದಂತೆ ಬಜೆಟ್ ಅತ್ಯಂತ ಆಶಾದಾಯಕವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೊಂಡಾಡಿದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ