ತರೀಕೆರೆ ಕನ್ನಡ ಭವನ ಕಟ್ಟಡಕ್ಕೆ ಮಾ.4 ರಂದು ಶಂಕುಸ್ಥಾಪನೆ: ಸೂರಿ ಶ್ರೀನಿವಾಸ್

KannadaprabhaNewsNetwork |  
Published : Feb 06, 2026, 01:15 AM IST
ಮಾರ್ಚ್ 4 ರಂದು ತರೀಕೆರೆ ಕನ್ನಡ ಭವನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ  ಕನ್ನಡ ಭವನ ನಾಮಫಲಕ ಅನಾವರಣಃ ಸೂರಿ ಶ್ರೀನಿವಾಸ್ ಮಾಹಿತಿ | Kannada Prabha

ಸಾರಾಂಶ

ತರೀಕೆರೆತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಯುವ ಕಾರ್ಯಕ್ರಮದಲ್ಲಿ ಮಾಚ್‌ 4 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದಲ್ಲಿ ಕನ್ನಡ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.

ಕಸಾಪ ಅಧ್ಯಕ್ಷ ರವಿ ದಳವಾಯಿ ಅಧ್ಯಕ್ಷತೆ

ಕನ್ನಡಪ್ರಭ ವಾರ್ತೆ, ತರೀಕೆರೆ

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಯುವ ಕಾರ್ಯಕ್ರಮದಲ್ಲಿ ಮಾಚ್‌ 4 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದಲ್ಲಿ ಕನ್ನಡ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದ್ದಾರೆ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ದಾನ ಮಾಡಿದ ಹಿರಿಯ ಸಮಾಜ ಸೇವಕರಾದ ಶಾಮಲ ಮಂಜುನಾಥ್, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ನವೀನ್ ಪೆನ್ನಯ್ಯ, ಪ್ರಧಾನ ಕಾರ್ಯದರ್ಶಿ ಮಿಲಿಟರಿ ಶ್ರೀನಿವಾಸ್, ಲೇಖಕ ತ.ಮ.ದೇವಾನಂದ್, ತಾಲೂಕು ಕಸಾಪ ಮಹಿಳಾ ಘಟಕ ಅಧ್ಯಕ್ಷೆ ಸುನಿತಾ ಕಿರಣ್, ಕೆ.ಎಸ್.ಶಿವಣ್ಣ ಉಪಸ್ಥಿತರಿರುತ್ತಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಅವರು ಕನ್ನಡ ಭವನ ನಾಮಫಲಕ ಅನಾವರಣಗೊಳಿಸಲಿದ್ದಾರೆ ಎಂದರು.ಕನ್ನಡ ಭವನ ನಿರ್ವಹಣೆಗೆ ರಚಿಸಿರುವ ಸಮಿತಿಗೆ ಕನ್ನಡಶ್ರೀ ಬಿ.ಎಸ್.ಭಗವಾನ್ ಅಧ್ಯಕ್ಷ, ಡಾ.ಎಂ.ಮರುಳಸಿದ್ದಯ್ಯ ಪಟೇಲ್ ಗೌರವಾಧ್ಯಕ್ಷ, ಕೆ.ಎಸ್.ಶಿವಣ್ಣ ಕೋಶಾಧ್ಯಕ್ಷ, ರವಿ ದಳವಾಯಿ ಪ್ರಧಾನ ಕಾರ್ಯದರ್ಶಿ, ನವೀನ್ ಪೆನ್ನಯ್ಯ, ಉಮಾಪ್ರಕಾಶ್, ಸುನೀತ ಕಿರಣ್ ಕಾರ್ಯದರ್ಶಿಯಾಗಿಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.ಹಿರಿಯ ಗಮಕ ಕಲಾವಿದ ಶ್ರೀರಾಮಸುಬ್ರಾಯ ಶೇಟ್ ಮತ್ತಿತರರು ಭಾಗವಹಿಸಿದ್ದರು. 5ಕೆಟಿಆರ್.ಕೆ.4 ಃ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಕನ್ನಡ ಭವನ ಕಟ್ಟಡದ ಶಂಕುಸ್ಥಾಪನೆ ಕುರಿತು ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್‌ ಮಾಹಿತಿ ನೀಡಿದರು. ರವಿ ದಳವಾಯಿ, ಮಿಲಿಟರಿ ಶ್ರೀನಿವಾಸ್, ನವೀನ್ ಪೆನ್ನಯ್ಯ, ಬಿ.ಎಸ್.ಭಗವಾನ್‌ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಣಿ ಚನ್ನಮ್ಮ ನಾಟ್ಯ ಮಂದಿರ ಶೀಘ್ರ ಪ್ರಾರಂಭಿಸಿ
ಗುರಿ ಸಾಧಿಸಲು ಕಠಿಣ ಏಕಾಗ್ರತೆ ಅಗತ್ಯ