ಉಪ್ಪಿನಂಗಡಿ: ವಿದ್ಯಾರ್ಥಿಗಳು ಸಾಧಿಸುವ ಛಲದಿಂದ ನಿರಂತರ ಶ್ರಮಿಸಬೇಕು. ಅಸಾಧ್ಯವಾದುದನ್ನು ಸಾಧಿಸುವ ಬಗ್ಗೆ ಕನಸು ಕಾಣಬೇಕು. ಆ ಮೂಲಕ ಗುರಿ ತಲುಪಲು ಶ್ರಮಿಸಬೇಕು. ಹಾಗಾದಾಗ ಮಾತ್ರ ತಮ್ಮ ಕಲಿಕೆ ಸಾರ್ಥಕವಾಗುತ್ತದೆ ಮತ್ತು ಜೀವನದಲ್ಲಿ ಏನಾದರೊಂದು ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಇಸ್ಮಾಯಿಲ್ ಇಕ್ಬಾಲ್, ವಿನ್ಸೆಂಟ್ ಫರ್ನಾಂಡಿಸ್, ಶಬ್ಬೀರ್ ಕೆಂಪಿ, ನಝೀರ್ ಮಠ, ಸವಿತಾ ಹರೀಶ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ರವಿರಾಜ್ ಸ್ವಾಗತಿಸಿ, ಉಪನ್ಯಾಸಕ ಹರಿಪ್ರಸಾದ್ ನಿರೂಪಿಸಿದರು.