ನದಿಗೆ ಕಾಲು ಜಾರಿ 4 ಮಂದಿ ನೀರುಪಾಲು

KannadaprabhaNewsNetwork |  
Published : Jan 19, 2026, 12:15 AM IST
18ಕೆಪಿಎಸ್‌ಎಂಜಿ 18ನೀಲಾಬಾಯಿ | Kannada Prabha

ಸಾರಾಂಶ

ಸಮೀಪದ ಕೂಡ್ಲಿಗೆರೆ ಬಳಿಯ ಅರಬಿಳಚಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಬಟ್ಟೆ ಒಗೆಯುವ ಸಂದರ್ಭದಲ್ಲಿ ಕಾಲು ಜಾರಿ ಭದ್ರಾ ನಾಲೆಗೆ ಉರುಳಿ ಬಿದ್ದು ಮೃತಪಟ್ಟ ದುರ್ಘಟನೆ ಭಾನುವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಹೊಳೆಹೊನ್ನೂರು

ಸಮೀಪದ ಕೂಡ್ಲಿಗೆರೆ ಬಳಿಯ ಅರಬಿಳಚಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಬಟ್ಟೆ ಒಗೆಯುವ ಸಂದರ್ಭದಲ್ಲಿ ಕಾಲು ಜಾರಿ ಭದ್ರಾ ನಾಲೆಗೆ ಉರುಳಿ ಬಿದ್ದು ಮೃತಪಟ್ಟ ದುರ್ಘಟನೆ ಭಾನುವಾರ ನಡೆದಿದೆ.

ಈವರೆಗೂ ನಾಲ್ವರ ಶವ ಪತ್ತೆಯಾಗಿಲ್ಲ. ಸದ್ಯ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರ ಪತ್ತೆಗೆ ತೀವ್ರ ಕ್ರಮ ಕೈಗೊಂಡಿದ್ದಾರೆ.

ಅರೆಬಳಚಿ ಗ್ರಾಮದ ನೀಲಾಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24) ಮತ್ತು ಅಳಿಯ ಪರಶುರಾಮ (28) ನೀರು ಪಾಲಾದ ದುರ್ದೈವಿಗಳು.

ಘಟನೆ ವಿವರ:

ಕುಟುಂಬದ ನಾಲ್ವರು ಕೂಡ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಬಟ್ಟೆ ತೊಳೆಯಲು ಭದ್ರಾ ನಾಲೆಯತ್ತ ಹೊಗಿದ್ದಾರೆ. ತಾಯಿ ನೀಲಾಬಾಯಿ ಮತ್ತು ಮಗಳು ಶ್ವೇತಾ ಬಟ್ಟೆ ಒಗೆಯಲು ಮುಂದಾಗಿದ್ದಾರೆ. ಈ ವೇಳೆಯಲ್ಲಿ ತಾಯಿ, ಮಗಳು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ತಕ್ಷಣವೇ ಇವರನ್ನು ರಕ್ಷಿಸಲು ಮಗ ರವಿಕುಮಾರ್‌ ಮತ್ತು ಅಳಿಯ ಪರಶುರಾಮ್‌ ನಾಲೆಗೆ ಧುಮುಕಿದ್ದಾರೆ. ಆದರೆ ನಾಲ್ವರು ಕೂಡ ನೀರಿನಿಂದ ಮೇಲೆ ಬರಲು ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ಆ ಸ್ಥಳದಲ್ಲಿ ಯಾರೂ ಇರಲಿಲ್ಲ ಎನ್ನಲಾಗುತ್ತಿದೆ.

ಅರಬಿಳಚಿ ಗ್ರಾಮದ ನೀಲಾಬಾಯಿ ಮಗಳಾದ ಶ್ವೇತಾ ಅವರನ್ನು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮದ ಪರಶುರಾಮ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು.

ಅರಬಿಳಚಿ ಗ್ರಾಮದಲ್ಲಿ ಜ.12 ರಿಂದ 16ರವರೆಗೆ ಮಾರಿಕಾಂಬ ಜಾತ್ರಾಮಹೋತ್ಸವ ಅದ್ದೂರಿಯಾಗಿ ಜರುಗಿದ್ದು, ಈ ಹಬ್ಬಕ್ಕಾಗಿ ಮಗಳು ಶ್ವೇತಾ ತಮ್ಮ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ತವರಿಗೆ ಆಗಮಿಸಿದ್ದರು. ಮನೆಗೆ ಹೆಚ್ಚು ಜನ ನೆಂಟರು ಆಗಮಿಸಿದ್ದರಿಂದ ಈ ಕುಟುಂಬ ಬಟ್ಟೆ ತೊಳೆಯಲೆಂದು ನಾಲೆಗೆ ಬಂದಿದ್ದರು.

ನಾಲೆಯ ದಡದಲ್ಲಿ ಬಟ್ಟೆ ಹಾಗೂ ಎರಡು ಬೈಕ್ ಗಳನ್ನು ಕಂಡ ಸ್ಥಳೀಯರು ಸ್ಥಳದಲ್ಲಿ ಯಾರೂ ಇಲ್ಲದ್ದರಿಂದ ಅನುಮಾನಗೊಂಡು ಪಟ್ಟಣದ ಠಾಣೆಗೆ ದೂರವಾಣಿ ಮುಖಾಂತರ ಮಾಹಿತಿ ನೀಡಿದ್ದಾರೆ. ಬೈಕ್‌ ಸಂಖ್ಯೆ ಆಧಾರದಲ್ಲಿ ಸಂಪರ್ಕಿಸಿದಾಗ ನಾಲೆಗೆ ಬಂದವರ ಮಾಹಿತಿ ದೊರಕಿದೆ.

ಡಿವೈಎಸ್ಪಿ ಕಾರ್ಯಪ್ಪನವರ ನೇತೃತ್ವದಲ್ಲಿ ಪಿಐ ಶಿವಪ್ರಸಾದ್, ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಸ್ವಾರ್ಥ ಸೇವೆಯಿಂದ ಸಾಮಾಜಿಕ ಪಿಡುಗುಗಳ ದೂರಗೊಳಿಸಲು ಸಾಧ್ಯ: ಸಮಾಜ ಸೇವಕ ಡಾ.ಟಿ.ಶ್ರೀನಿವಾಸಪ್ಪ
ಇತಿಹಾಸ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿಗೆ ಸಂಭ್ರಮದ ರಥೋತ್ಸವ