ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಬಂಧನ: ಅಪಾಯ ತಪ್ಪಿಸಿದ ಪೊಲೀಸರು

KannadaprabhaNewsNetwork |  
Published : Nov 14, 2023, 01:16 AM IST

ಸಾರಾಂಶ

ಸಮಯಪ್ರಜ್ಞೆ ಮೆರೆದ ಪಿಎಸ್‌ಐ ವಸಂತ್

ಶಿವಮೊಗ್ಗ: ದರೋಡೆಗೆ ಸ್ಕೆಚ್ ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್‌ ವಶಪಡಿಸಿಕೊಂಡಿದ್ದಾರೆ.

ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳು. ಕೋಟೆಗಂಗೂರಿನ ಸಂತೋಷ್ ಎಂಬಾಂತ ತಲೆಮರೆಸಿಕೊಂಡಿದ್ದಾನೆ.

ನಗರದ ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್‌ ಪಕ್ಕದಲ್ಲಿ ನಾಲ್ಕೈದು ಜನ ಯುವಕರ ಗುಂಪೊಂದು ಭಾರಿ ಅನಾಹುತ ಸೃಷ್ಠಿಸಲು ಮುಂದಾಗಿತ್ತು‌. ಎನ್.ಟಿ. ರಸ್ತೆಯ ಫಲಕ್ ಶಾದಿ ಮಹಲ್‌ನ ಪಕ್ಕದ ಖಾಲಿ ಜಾಗದಲ್ಲಿ, ಹೊಂದಿಕೊಂಡಿರುವ ರಸ್ತೆಯಲ್ಲಿ ಓಡಾಡುವ ಜನರು ಮತ್ತು ವಾಹನಗಳನ್ನು ತಡೆದು ದರೋಡೆಗೆ ಹೊಂಚು ಹಾಕುತ್ತಿದ್ದರು.

ಈ ಬಗ್ಗೆ ಮಾಹಿತಿ ಹಿನ್ನಲೆ ಪಿಎಸ್‌ಐ ವಸಂತ್ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಆಗ ನಾಲೈದು ಜನರು ಅಪಾಯಕರವಾದ ಆಯುಧಗಳನ್ನು ಹಿಡಿದು, ಸುಲಿಗೆ ಉದ್ದೇಶದಿಂದ ಹೊಂಚು ಹಾಕುತ್ತಿರುವುದು ತಿಳಿದುಬಂದಿದೆ. ಈ ಸಂದರ್ಭ ಆಯುಧಗಳ ಸಮೇತ 4 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ಓರ್ವ ತಪ್ಪಿಸಿಕೊಂಡಿದ್ದಾನೆ. ಹಣದ ಆಸೆಗೆ ಈ ರೀತಿ ಕೃತ್ಯ ಮಾಡಿದ್ಯಾಗಿ ವಿಚಾರದಲ್ಲಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ.

ಬಂಧಿತರಿಂದ ಕಬ್ಬಿಣದ ರಾಡು, ಮರದ ಹಿಡಿ ಇರುವ ಮಚ್ಚು, 50 ಗ್ರಾಂ ತೂಕದ ಖಾರದ ಪುಡಿ ಇರುವ ಕವರ್‌, 2 ಸ್ಟೀಲ್ ಡ್ರಾಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

- - -

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌