ಪೊಲೀಸ್ ಇಲಾಖೆಗೆ ನಾಲ್ಕು ವಾಹನಗಳು ಹಾಗೂ ಒಂದು ಆಂಬ್ಯುಲೆನ್ಸ್: ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Mar 08, 2026, 01:30 AM IST
7ಕೆಎಂಎನ್ ಡಿ18  | Kannada Prabha

ಸಾರಾಂಶ

ತಾಲೂಕಿನ ರಾವಣಿ ಗ್ರಾಮದಲ್ಲಿ ₹4.5 ಕೋಟಿ ಅನುದಾನದಲ್ಲಿ ಏತ ನೀರಾವರಿ ಯೋಜನೆ ಪುನರುಜ್ಜೀವನ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಏತ ನೀರಾವರಿ ಯೋಜನೆಯನ್ನು ಸಣ್ಣ ನೀರಾವರಿ ಇಲಾಖೆ ವತಿಯಿಂದ ಪೂರ್ಣ ಪ್ರಮಾಣದ ಪುನಶ್ಚೇತನಕ್ಕೆ ಒತ್ತು ನೀಡಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಸಿಆರ್‌ಎಸ್ ಅನುದಾನದಲ್ಲಿ ಪೊಲೀಸ್ ಇಲಾಖೆಗೆ ನಾಲ್ಕು ವಾಹನಗಳು ಹಾಗೂ ಒಂದು ಆ್ಯಂಬುಲೆನ್ಸ್ ನೀಡುವ ಮೂಲಕ ಹೊಸ ಕಾಯಕಲ್ಪ ಕಲ್ಪಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ತಾಲೂಕಿನ ರಾವಣಿ ಗ್ರಾಮದಲ್ಲಿ ₹4.5 ಕೋಟಿ ಅನುದಾನದಲ್ಲಿ ಏತ ನೀರಾವರಿ ಯೋಜನೆ ಪುನರುಜ್ಜೀವನ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಏತ ನೀರಾವರಿ ಯೋಜನೆಯನ್ನು ಸಣ್ಣ ನೀರಾವರಿ ಇಲಾಖೆ ವತಿಯಿಂದ ಪೂರ್ಣ ಪ್ರಮಾಣದ ಪುನಶ್ಚೇತನಕ್ಕೆ ಒತ್ತು ನೀಡಲಾಗಿದೆ ಎಂದರು.

ಹೊಸದಾಗಿ ಪಂಪು ಮೋಟರ್ ಹಾಗೂ ಎಂಎಸ್ ಪೈಪ್ ಅಳವಡಿಸುವ ಮೂಲಕ ಶಾಶ್ವತ ಪರಿಹಾರ ನೀಡಿ ಯೋಜನೆಯ ಲಾಭವನ್ನು ರೈತರು ಪಡೆಯುವ ಅವಕಾಶ ಕಲ್ಪಿಸಲಾಗುವುದು. ಮಳವಳ್ಳಿಯಿಂದ ಪೂರಿಗಾಲಿಗೆ ಸೇರುವ ರಸ್ತೆಗೆ ₹28 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿ ವಿಸ್ತರಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ರಾವಣಿ ಗ್ರಾಮದ ಪ್ರಮುಖ ರಸ್ತೆ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ಮಳವಳ್ಳಿ ನೀರಾವರಿ ಯೋಜನೆಗೆ ಹಿಂದೆ ₹400 ಕೋಟಿ ಅನುದಾನ ತರಲಾಗಿತ್ತು. ಪ್ರಸಕ್ತ ಬಜೆಟ್‌ನಲ್ಲಿ ಟಿ. ನರಸಿಪುರ ಮಳವಳ್ಳಿ ಭಾಗದ ಕಿರುಗಾವಲು ಕಲ್ಕುಣಿ, ಸುಜ್ಜಲೂರು ಸೇರಿದಂತೆ ಅಂಗ್ರಪುರತನಕ ನಾಲಾ ಆಧುನೀಕರಣ ಕಾಮಗಾರಿಗೆ ₹200 ಕೋಟಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಕೊರಟಗೆರೆ - ಬಾವಲಿ ರಸ್ತೆಯನ್ನು ಕೆ- ಶಿಫ್‌ನಲ್ಲಿ ಮಳವಳ್ಳಿಯಿಂದ ಮೈಸೂರಿನವರೆಗೆ ಚತುಷ್ಪಥ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು. ಕೆರೆ ತುಂಬಿಸುವ ಯೋಜನೆಗೆ ಒತ್ತು ನೀಡಲಾಗಿದೆ. ಕಾರ್ಮಿಕ ಮಕ್ಕಳ ವಿಶೇಷ ಶಾಲೆಯನ್ನು ಮಳವಳ್ಳಿಗೆ ನೀಡಲಾಗಿದೆ. ಹೆಚ್ಚುವರಿ ಬಜೆಟ್‌ನಲ್ಲಿ ಮತ್ಸ್ಯೋದ್ಯಮ ವಿಚಾರವನ್ನು ಸೇರಿಸಲಾಗುವುದು ಜೊತೆಗೆ ಪಟ್ಟಣದ ಅಭಿವೃದ್ಧಿಗೆ ಪೌರಾಡಳಿತ ಇಲಾಖೆ ವತಿಯಿಂದ ₹10 ಕೋಟಿ ಬಿಡುಗಡೆಗೊಳಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆಂದು ತಿಳಿಸಿದರು.

ತಾಲೂಕಿನ ಅವ್ವೇರಹಳ್ಳಿ, ಹಂಗ್ರಾಪುರ, ಚನ್ನಪಿಳ್ಳೇಕೊಪ್ಪಲು, ಕಿರುಗಾವಲು, ಗುಗ್ನುನಹುಂಡಿ, ಹುಲ್ಲೇಗಾಲ, ಮಂಚನಹಳ್ಳಿ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ದೇವಿಪುರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದ ₹23 ಲಕ್ಷ ಕಾಂಪೌಂಡ್ ನಿರ್ಮಾಣ, ತಾಲೂಕಿನ ಎಂ.ಬಸವನಪುರ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ ಹಾಗೂ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎನ್.ಆರ್.ಎಲ್.ಎಂ. ವತಿಯಿಂದ ಅಕ್ಕ ಕೆಫೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ವೇಳೆ ಮನ್ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಕೃಷ್ಣೇಗೌಡ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಜಿಪಂ ಎಇಇ ಅಪ್ಪಯ್ಯ ಭೋವಿ, ಲೋಕೋಪಯೋಗಿ ಇಲಾಖೆ ಎಇಇ ಎ.ಎಂ.ಸೋಮಶೇಖರ್, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ದಿಲೀಪ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಿ.ಮಾದೇಶ್, ಕೆಪಿಸಿಸಿ ಸದಸ್ಯ ಸಿದ್ದೇಗೌಡ, ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಗ್ರಾಪಂ ಮಾಜಿ ಅಧ್ಯಕ್ಷರಾದ ಮಹದೇವಸ್ವಾಮಿ, ಕೆ.ಸಿ.ಚೌಡೇಗೌಡ, ಗೋವಿಂದರಾಜು, ಮಾಜಿ ಉಪಾಧ್ಯಕ್ಷರಾದ ಡಿ.ಬಿ.ಬಸವರಾಜು, ಮಾದೇಗೌಡ, ಮುಖಂಡರಾದ ಸಿ.ಎಂ.ವೇದಮೂರ್ತಿ, ಬಂಕ್ ಮಹದೇವು, ಸಂತೋಷ್, ರಾಜೇಶ್, ದೀಪು, ಚೇತನ್ ನಾಯಕ್, ರವೀಂದ್ರ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಪಂಗಳಿಗೆ ಜಿಪಂ ಸಿಇಒ ಭೇಟಿ: ಅಭಿವೃದ್ಧಿ ಪರಿಶೀಲನೆ
ವಿ.ಸಿ.ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ೧೪ರಂದು ಶಂಕುಸ್ಥಾಪನೆ: ಎಚ್‌ಡಿಕೆ