ಕನ್ನಡಪ್ರಭ ವಾರ್ತೆ ಮಂಡ್ಯ
1987-88ರಲ್ಲಿ ನನ್ನ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಅಂದಿನ ಸರ್ಕಾರ ತಮ್ಮನ್ನು ಮೇಲ್ಮನೆ ಸದಸ್ಯೆಯನ್ನಾಗಿ ಮಾಡಿದ್ದ ಸಂದರ್ಭದಲ್ಲಿ ಬಂಜಾರ ಸಂಘಗಳನ್ನು ಸ್ಥಾಪಿಸಿ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಮಂಡ್ಯದ ಗುತ್ತಲು ಗ್ರಾಮದ ಸರ್ವೇ ನಂಬರ್ 530ರಲ್ಲಿ 1.28 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೃಷ್ಣನಾಯಕ್ ಅವರಿಗೆ ಜವಾಬ್ದಾರಿ ನೀಡಿ ವಸತಿ ವ್ಯವಸ್ಥೆ ಮಾಡಿಕೊಡಲಾಯಿತು. ನಂತರ ಹತ್ತಾರು ಫಲಾನುಭವಿಗಳು ಅಲ್ಲಿ ನೆಲೆಸಿದ್ದು ಅವರೆಲ್ಲರಿಗೂ ಹಕ್ಕುಪತ್ರ ಲಭ್ಯವಾಯಿತು ಎಂದು ವಿವರಿಸಿದರು.1998ರಲ್ಲಿ ಆ ಬಡಾವಣೆಯನ್ನು ಬಿ.ಟಿ.ಲಲಿತಾ ನಾಯಕ್ ಬಡಾವಣೆ ಎಂಬುದಾಗಿ ಮರು ನಾಮಕರಣ ಮಾಡಲಾಯಿತು. ಸಂಘದ ಮೂಲಕ ನ್ಯಾಯಬೆಲೆ ಅಂಗಡಿ ವಾಚನಾಲಯ, ಸಮುದಾಯ ಭವನ, ಅಂಗನವಾಡಿ ಕೇಂದ್ರ, ಸಂತ ಸೇವಾಲಾಲ್ ಮಂದಿರವನ್ನು ಮಂಜೂರು ಮಾಡಿಸಲಾಯಿತು. ಆದರೆ, ಕೃಷ್ಣನಾಯಕ್ ಮರಣದ ನಂತರ ಆತ ಮಾಡಿರುವ ವಂಚನೆ ಬಯಲಿಗೆ ಬಂದಿದೆ. ಅವರ ಕುಟುಂಬದವರೇ ಬಂಜಾರ ಪದಾಧಿಕಾರಿಗಳಾಗಿ ನೇಮಕಗೊಂಡಿದ್ದು ಮೂರು ಲಕ್ಷ ರು. ಕೊಟ್ಟರೆ ಮಾತ್ರ ಹಕ್ಕುಪತ್ರವನ್ನು ನೀಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ, ಕೆಲವರಲ್ಲಿ ಭಯ ಹುಟ್ಟಿಸುತ್ತಿ ದಾರಿ ಎಂದು ದೂರಿದರು.
ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಅಧ್ಯಕ್ಷ ಸಿ.ಎಂ.ಶಿವಕುಮಾರ್ ನಾಯಕ್, ಕರ್ನಾಟಕ ಬಂಜಾರ ಜಾಗೃತಿ ದಳದ ರಾಜ್ಯಾಧ್ಯಕ್ಷ ತಿಪ್ಪ ಚನ್ನನಾಯಕ, ಜಿಲ್ಲಾ ಲಂಬಾಣಿ ಸೇವಾ ಸಂಘದ ಅಧ್ಯಕ್ಷ ಎಂ.ಕೆ.ಬಾಲರಾಜ್, ಕರ್ನಾಟಕ ಬಂಜಾರ ಜಾಗೃತಿ ದಳದ ಮಹೇಶ್ ನಾಯಕ, ಮುಖಂಡರಾದ ಪುಟ್ಟಸ್ವಾಮಿ, ಶೀನಾ ನಾಯಕ್, ವಿವೇಕ್ ಉಪಸ್ಥಿತರಿದ್ದರು.