ಹಾವೇರಿ: ಇಲ್ಲಿಯ ಸುಮುಖ ಆಯುರ್ವೇದ ಆಸ್ಪತ್ರೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಕುರವತ್ತೇರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಇಂತಹ ಶಿಬಿರಗಳು ಅಗತ್ಯವಾಗಿದ್ದು, ಸುಮುಖ ಆಯುರ್ವೇದ ಆಸ್ಪತ್ರೆಯ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಡಾ.ಪ್ರಕಾಶ ಬಾರ್ಕಿ ಹಾಗೂ ಡಾ.ಅಶ್ವಿನಿ ವಸ್ತçದ್ ಅವರು ತಪಾಸಣೆ ಮಾಡಿಸಿಕೊಂಡ ಜನರ ವರದಿಗಳನ್ನು ಪರಿಶೀಲಿಸಿ, ಮೂಳೆಗಳ ಆರೋಗ್ಯ ಕಾಪಾಡಿಕೊಳ್ಳುವ ವಿಧಾನಗಳು, ಅಗತ್ಯ ಜೀವನಶೈಲಿ ಬದಲಾವಣೆಗಳು ಹಾಗೂ ಆಯುರ್ವೇದ ಚಿಕಿತ್ಸೆಯ ಕುರಿತು ವೈಯಕ್ತಿಕ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೀರೇಶ ಮಡ್ಲೂರ, ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ವಿನಾಯಕ ಹುದ್ದಾರ ಇತರರು ಉಪಸ್ಥಿತರಿದ್ದರು.