29,30 ಕ್ಕೆ ಉಚಿತ ಮೂಳೆ ಸಾಂದ್ರತಾ ಪರೀಕ್ಷೆ

KannadaprabhaNewsNetwork |  
Published : May 28, 2025, 01:46 AM IST

ಸಾರಾಂಶ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಮೇ 29 ಹಾಗೂ 30 ರಂದು 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ‘ಉಚಿತ ಮೂಳೆ ಸಾಂದ್ರತಾ ಪರೀಕ್ಷೆ’ ಹಾಗೂ ವೈದ್ಯರೊಂದಿಗೆ ಉಚಿತ ಸಮಾಲೋಚನೆಯನ್ನು ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಮೇ 29 ಹಾಗೂ 30 ರಂದು 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ‘ಉಚಿತ ಮೂಳೆ ಸಾಂದ್ರತಾ ಪರೀಕ್ಷೆ’ ಹಾಗೂ ವೈದ್ಯರೊಂದಿಗೆ ಉಚಿತ ಸಮಾಲೋಚನೆಯನ್ನು ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ವರ್ಗಿಸ್ ಪಿ. ಜಾನ್ ತಿಳಿಸಿದ್ದಾರೆ. ದೀರ್ಘಕಾಲದಿಂದ ಮಂಡಿ ಹಾಗೂ ಸೊಂಟದ ನೋವಿನಿಂದ ಬಳಲುತ್ತಿರುವವರು, ಮೆಟ್ಟಿಲುಗಳನ್ನು ಹತ್ತಿಳಿಯಲು ಕಷ್ಟ ಪಡುತ್ತಿರುವವರು, ಮೂಳೆ ಸವೆತ ಸಮಸ್ಯೆಯಿಂದ ಬಳಲುತ್ತಿರುವವರು, ಋತುಚಕ್ರ ನಿಂತ ಮಹಿಳೆಯರಲ್ಲಿ ಮೂಳೆಯ ಸವೆತ ಕಂಡು ಬರುತ್ತಿದ್ದು, ಇಂತಹವರು ಈ ಶಿಬಿರದ ಲಾಭ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ. ಮೊದಲು ಹೆಸರು ನೊಂದಾಯಿಸಿದ 100 ಜನರಿಗೆ ಮಾತ್ರ ಆದ್ಯತೆ ಇದ್ದು, ಪೂರ್ವ ನೋಂದಣಿಗೆ 9538897698 ಇಲ್ಲಿಗೆ ಕರೆ ಮಾಡಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ