ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

KannadaprabhaNewsNetwork |  
Published : Feb 03, 2024, 01:45 AM IST
ವಿವಿ ವಿಜ್ಙಾನ ಕಾಲೇಜಿನ ಯುವ ರೆಡ್‌ಕ್ರಾಸ್‌ ಘಟಕ ಮತ್ತು ರೆಡ್‌ರಿಬ್ಬನ್‌ ಘಟಕ, ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಉಚಿತ ನೇತ್ರ ತಪಾಸಣಾ ಶಿಬಿರ’ವನ್ನು ವಿವಿ ಯುವರೆಡ್‌ ಕ್ರಾಸ್‌ ಘಟಕದ ಸಲಹಾ ಸಮಿತಿ ಸದಸ್ಯ ಬಿ. ಆರ್.ಉಮೇಶ್‌ ಗುರುವಾರ ಉದ್ಘಾಟಿಸಿದರು.ಡಾ. ಪ್ರಕಾಶ್ ಎಂ.ಶೇಠ್, ಡಾ.ಪೂರ್ಣಿಮಾ ಡಿ., ಡಾ.ರಶ್ಮಿ ಹೊಸಮನಿ, ಡಾ. ಪರಿಮಳ ಬಿ.,ಆಂತೋಣಿ ಅನಿಲ್ ಜಿ. ವಿ., ಇನ್ನಿತರರು ಇದ್ದಾರೆ. | Kannada Prabha

ಸಾರಾಂಶ

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ತುಮಕೂರು: ಮೊಬೈಲ್ ಹಾಗೂ ಕಂಪ್ಯೂಟರ್‌ನ ಬಳಕೆ ಹೆಚ್ಚಾಗಿರುವುದರಿಂದ ಕಣ್ಣಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇದರಿಂದಾಗಿ ದೃಷ್ಟಿದೋಷದ ಸಮಸ್ಯೆ ಯುವಕರಲ್ಲಿ ಕಾಡುತ್ತಿದೆ. ಮಂದ ದೃಷ್ಟಿಯಿಂದ ದಪ್ಪ ಗಾಜಿನ ಕನ್ನಡಕ ಧರಿಸುವಂತಾಗಿದೆ. ಈ ಸಮಸ್ಯೆಗಳಿಂದ ಪಾರಾಗಲು ಪೌಷ್ಟಿಕ ಆಹಾರ ಸೇವಿಸಬೇಕು ಎಂದು ವಿವಿಯ ಯುವರೆಡ್‌ ಕ್ರಾಸ್‌ ಘಟಕದ ಸಲಹಾ ಸಮಿತಿ ಸದಸ್ಯ ಬಿ. ಆರ್‌. ಉಮೇಶ್‌ ಹೇಳಿದರು.

ವಿವಿ ವಿಜ್ಙಾನ ಕಾಲೇಜಿನ ಯುವ ರೆಡ್‌ ಕ್ರಾಸ್‌ ಘಟಕ ಮತ್ತು ರೆಡ್‌ ರಿಬ್ಬನ್‌ ಘಟಕ, ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಉಚಿತ ನೇತ್ರತಪಾಸಣಾ ಶಿಬಿರ’ವನ್ನು ಗುರುವಾರಉದ್ಘಾಟಿಸಿ ಮಾತನಾಡಿದರು.

ಹಸಿರು ತರಕಾರಿಗಳು, ಹಣ್ಣುಗಳನ್ನು ಸೇವಿಸುವುದರಿಂದ ದೃಷ್ಟಿದೋಷದ ಸಮಸ್ಯೆ ಬರುವುದಿಲ್ಲ. ನಾವು ಸೇವಿಸುವ ಆಹಾರವೇ ನಮಗೆ ಔಷಧಿಯಾಗಿ ಕೆಲಸ ಮಾಡುತ್ತದೆ. ಮಂದ ಬೆಳಕಿನಲ್ಲಿ ಹೆಚ್ಚಾಗಿ ಮೊಬೈಲ್ ಬಳಸುವುದರಿಂದ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಆರೋಗ್ಯಕರ ಕಣ್ಣುಗಳು ದೃಷ್ಟಿಹೀನತೆಯ ಸಮಸ್ಯೆಗೆ ಒಳಗಾಗುತ್ತಿರುವುದಕ್ಕೆ ಕಾರಣ ನಮ್ಮಜೀವನ ಶೈಲಿಯಾಗಿದೆ ಎಂದರು.

ವಿವಿಯ 100 ಕ್ಕೂ ಹೆಚ್ಚು ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಚಿತ ಕಣ್ಣು ತಪಾಸಣೆಯಲ್ಲಿ ಭಾಗವಹಿಸಿದ್ದರು.

ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ ಎಂ.ಶೇಠ್, ಯುವರೆಡ್‌ ಕ್ರಾಸ್‌ ಘಟಕದ ಸಮನ್ವಯಾಧಿಕಾರಿ ಡಾ. ಪೂರ್ಣಿಮಾ ಡಿ., ಕಾರ್ಯಕ್ರಮಾಧಿಕಾರಿ ಡಾ. ರಶ್ಮಿ ಹೊಸಮನಿ, ರೆಡ್‌ ರಿಬ್ಬನ್‌ ಘಟಕದ ಸಂಯೋಜಕಿ ಡಾ. ಪರಿಮಳ ಆಂತೋಣಿ ಅನಿಲ್ ಜಿ. ವಿ. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!