ಕನ್ನಡಪ್ರಭ ವಾರ್ತೆ ಮೈಸೂರು
ಹಿನಕಲ್ ನ ನಿಂಗಮಣಿ ನೀಲಕಂಠಪ್ಪ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಹೂಟಗಳ್ಳಿ ನಗರ ಸಭೆ, ಇಎಸ್ಐ ಮತ್ತು ಪಿಕೆಟಿಬಿ ಆಸ್ಪತ್ರೆ, ಇಲವಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ನಡೆಯುತ್ತಿರುವ ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರು ಪರೀಕ್ಷೆ ಮಾಡಿ ಚಿಕಿತ್ಸೆಯನ್ನು ನೀಡುತ್ತಿದ್ದು ಇದು ಉತ್ತಮ ಬೆಳವಣಿಗೆ. ಈ ಶಿಬಿರದಲ್ಲಿ ಹೆಚ್ಚಿನ ಜನರು ಬಂದು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಶಿಬಿರದಲ್ಲಿ ವಿವಿಧ ಆಸ್ಪತ್ರೆಗಳಾದ ಇಎಸ್ಐ, ಪಿಕೆಟಿಬಿ ಆಸ್ಪತ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಇಲವಾಲ, ಕೆವಿಸಿ ಆಸ್ಪತ್ರೆ, ಭಾರತ್ ಕ್ಯಾನ್ಸರ್ ಆಸ್ಪತ್ರೆ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಎನ್ ಜೆ ಆಸ್ಪತ್ರೆ, ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರ, ಲೈನ್ ಸ್ಟೇಷನ್ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರಿಂದ ಶಿಬಿರದಲ್ಲಿ ಉಚಿತವಾಗಿ ಬಿಪಿ ಶುಗರ್ ಟಿಬಿ, ಎಚ್ಐವಿ ಹೆಪಟೈಟಿಸ್ ಬಿ ಮತ್ತು ಸಿ ಚರ್ಮರೋಗ ಕಿಡ್ನಿ ಪರೀಕ್ಷೆ, ಗರ್ಭಕೋಶ ತೊಂದರೆ, ಮೂಳೆ ತಂಬಾಕು, ಇ.ಎನ್.ಟಿ, ಕ್ಯಾನ್ಸರ್, ಸ್ತ್ರೀರೋಗ, ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದಿಂದ ರಕ್ತದಾನ, ಕಣ್ಣಿನ ತಪಾಸಣೆಯನ್ನು ಸರಿ ಸುಮಾರು 500 ಜನರು ಬಂದು ಪಾಲ್ಗೊಂಡರು.