ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಕಾರ್ಯಕ್ರಮದಲ್ಲಿ ಸುಮಾರು ೧೨೦ ಜನ ಇದರ ಉಪಯೋಗವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾದ ಬಿ. ವಿ. ವಿಜಯ್ ಮಾತನಾಡಿ, ಜನಸಾಮಾನ್ಯರು ತಮ್ಮ ಕಾರ್ಯದ ಒತ್ತಡದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನಕೊಡದೆ ಮಧುಮೇಹ ಮತ್ತು ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿರುತ್ತಾರೆ ಹಾಗಾಗಿ ಪ್ರತಿಯೊಬ್ಬರೂ ವರ್ಷಕ್ಕೆ ಒಂದು ಬಾರಿಯಾದರೂ ರಕ್ತದ ಒತ್ತಡ ಮತ್ತು ಮಧುಮೇಹ ಪರೀಕ್ಷೆಗೆ ಒಳಪಡಬೇಕು ಎಂದು ತಿಳಿಸಿದರು. ಪುರಸಭೆಯ ಆರೋಗ್ಯದ ನಿರಿಕ್ಷಕ ರಾಜು ಮಾತನಾಡಿ ಲೈಂಗಿಕ ಕ್ರಿಯೆಯಲ್ಲಿ ಸುರಕ್ಷತೆಯನ್ನು ಕಾಪಾಡಿಕೊಂಡರೆ ಏಡ್ಸ್ ರೋಗವನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಚನ್ನರಾಯಪಟ್ಟಣದ ರೋಟರಿ ಕ್ಲಬ್ ಖಜಾಂಚಿ ನಟರಾಜ್, ಜ್ಯೋತಿ, ಶ್ರೀನಿವಾಸ್, ಹಾಸನ ಏಡ್ಸ್ ಜಾಗೃತಿ ದಳದ ರಮೇಶ್, ತಾಲೂಕು ಅಧಿಕಾರಿ ಕೆಂಚೇಗೌಡ ಮತ್ತಿತರಿದ್ದರು.