ಕನ್ನಡಪ್ರಭ ವಾರ್ತೆ ಹಾಸನ
ಪುಪ್ಪಗಿರಿ ಮಹಾ ಸಂಸ್ಥಾನ ಮಠದ ಶ್ರೀ. ಲಿಂ. ಬಸವರಾಜ ದೇಶಿಕೇಂದ್ರ ಮಹಾಸ್ವಾಮೀಜಿಯವರ 22ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಬೆಳಗ್ಗೆ ಪುಷ್ಪಗಿರಿ ಮಠ ಮತ್ತು ವಿಶ್ವ ವೀರಶೈವ, ಲಿಂಗಾಯತ ಮಹಾವೇದಿಕೆ ವತಿಯಿಂದ ದೀಕ್ಷಾ ವಟುಗಳಿಗೆ ಉಚಿತವಾಗಿ ಕರಡಿಗೆ, ಲಿಂಗು, ಶಿವದಾರ, ಪಂಚೆ, ಟವಲ್ ಹಾಗೂ 240 ವಟುಗಳಿಗೆ ಲಿಂಗಧಾರಣೆ, ಇಷ್ಟಲಿಂಗ ಪೂಜೆ ನೆರವೇರಿಸಿ ಮಾತನಾಡಿ, ವಿಶ್ವ ವೀರಶೈವ ಲಿಂಗಾಯತ ಮಹಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಪುರ ಮಠದ ಶ್ರೀ ನಟರಾಜ್ ಅವರ ನೇತೃತ್ವದಲ್ಲಿ ಹಾಸನ ಜಿಲ್ಲಾ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಅವರು ವಿಶ್ವ ವೀರಶೈವ ಲಿಂಗಾಯತ ಮಹಾ ವೇದಿಕೆಯಿಂದ ಇಲ್ಲಿಯವರೆಗೆ 28 ಸಾವಿರಕ್ಕೂ ಅಧಿಕ ದೀಕ್ಷಾ ವಟುಗಳಿಗೆ ಇಷ್ಟಲಿಂಗ ಪೂಜೆ, ಲಿಂಗಧಾರಣೆ ಮತ್ತು ಧಾರ್ಮಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ ಎಂದು ತಿಳಿಸಿ, ಅಲ್ಲದೇ ರಾಜ್ಯ, ತಮಿಳುನಾಡು ಮತ್ತು ಕೇರಳ ಹಾಗೂ ಹೊರ ರಾಜ್ಯಗಳಲ್ಲಿ ಜನ ಜಾಗೃತಿ, ಲಿಂಗಧಾರಣೆ ಮಾಡಿಕೊಂಡು ಬರುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪುಷ್ಪಗಿರಿ ಮಹಾ ಸಂಸ್ಥಾನಮಠದ ಪರಮಪೂಜ್ಯ ಜಗದ್ಗುರು ಶ್ರೀ ಸೋಮಶೇಖರ ಶಿವಾಚಾರ್ಯ ಮಹಾ ಸ್ವಾಮೀಜಿದಿವ್ಯ ಸಾನ್ನಿಧ್ಯ ವಹಿಸಿ ಅಶಿರ್ವಚನ ನೀಡಿ ನಮಗೆ ಲಿಂಗಪೂಜೆ ಬಹಳ ಶ್ರೇಷ್ಠವಾದುದು, ಗುರುಗಳಿಂದ ಲಿಂಗಧಾರಣೆ ಮಾಡಿಸಿಕೊಳ್ಳಬೇಕು. ಲಿಂಗ ಪೂಜೆ ಮಾಡಿದರೆ ಎಲ್ಲಾ ದೇವರನ್ನು ಪೂಜಿಸಿದಂತಾಗುತ್ತದೆ ಎಂದು ಪುಷ್ಪಗಿರಿ ಮಠದ ಶ್ರೀಗಳು ತಿಳಿಸಿದರು.
ಅರಕಲಗೂಡು ತಾಲೂಕು ಅಧ್ಯಕ್ಷ ಕೊಣನೂರು ಅಮೃತೇಶ್ ಮುಂತಾದವರು ಉಪಸ್ಥಿತರಿದ್ದರು.