ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಯಲು ಸೀಮೆ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ ಸೇರದಂತೆ ಅನೇಕ ಹಿರಿಯ ಮುಖಂಡರೊಂದಿಗೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಗುರುವಾರ ಕಾರ್ಯಕ್ರಮದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವ ವಧುವಿಗೆ ಬಟ್ಟೆ,ತಾಳಿ, ಕಾಲುಂಗುರ ವರನಿಗೆ ಬಟ್ಟೆ ನೀಡಲಿದ್ದು,ಹಾಗೂ ಸರ್ವರಿಗೂ ಕೂಡ ಭೋಜನ ವ್ಯವಸ್ಥೆ ಮಾಡಲಾಗಿದೆ, ಈ ವಿವಾಹ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿ,ಧರ್ಮದವರಿಗೆ ಕೂಡ ವಿವಾಹಕ್ಕೆ ಅವಕಾಶವಿದ್ದು, ಆವರವರ ಧರ್ಮ, ಸಂಪ್ರದಾಯಗಳಿಗನುಸಾರವಾಗಿ ವಿವಾಹ ಕಾರ್ಯಕ್ರಮ ನಡೆಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.ಈ ಉಚಿತ ಸಾಮೂಹಿರ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗಲಿಚ್ಚಿಸುವ ವಧು-ವರರು ಕಾನೂನು ರೀತಿಯಲ್ಲಿ ಸಂಬಂಧಿಸಿದ ದಾಖಲೆಗಳನ್ನು ಸಮಿತಿಯವರಿಗೆ ಒದಗಿಸಿ ಜೂ.12ರ ಒಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿ ಮನವಿ ಮಾಡಿದರು.
ಬಯಲು ಸೀಮೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ,ಈ ಪವಿತ್ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಅನೇಕ ಹಾಲಿ, ಮಾಜಿ ಸಚಿವರು, ಶಾಸಕರು, ಮುಖಂಡರು ಅಗಮಿಸಲಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ಚನ್ನವೀರಪ್ಪ ಗೌಡ, ಆರ್. ನಾಗಪ್ಪ,ಸಣ್ಣಕ್ಕಿ ಬಸವನಗೌಡ, ಆರಕೆರೆ ಮಧುಗೌಡ, ಎಚ್.ಬಿ. ಆಣ್ಣಪ್ಪ, ತಾ.ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಪುಪ್ಪರವೀಶ್ ಹಲವಾರು ಮುಖಂಡರು ಇದ್ದರು.