ತಾಲೂಕು ಮೊಗೇರ ಸೇವಾ ಸಮಿತಿ ಸಭೆ ತಾಲೂಕು ಅಧ್ಯಕ್ಷ ವಸಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಪತ್ರಿಕಾಭವನದಲ್ಲಿ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ತಾಲೂಕು ಮೊಗೇರ ಸೇವಾ ಸಮಿತಿ ಸಭೆ ತಾಲೂಕು ಅಧ್ಯಕ್ಷ ವಸಂತ್ ಕುಮಾರ್ ಅಧ್ಯಕ್ಷತೆಯಲ್ಲಿ ಪತ್ರಿಕಾಭವನದಲ್ಲಿ ಸೋಮವಾರ ನಡೆಯಿತು.ಸಂಘದ ಸದಸ್ಯರ ಮಕ್ಕಳಿಗೆ ಉಚಿತ ನೋಟ್ಬುಕ್ ಗಳನ್ನು ಮುಂದಿನ ಸೋಮವಾರ ವಿತರಿಸುವಂತೆ ತೀರ್ಮಾನಿಸಲಾಯಿತು.ಸಂಘದ ಮಾಜಿ ಅಧ್ಯಕ್ಷ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಚಿಕಿತ್ಸೆಗೆ 10 ಸಾವಿರ ರು.ಗಳನ್ನು ಸಂಘದ ವತಿಯಿಂದ ಅವರ ಕುಟುಂಬಕ್ಕೆ ನೀಡಲಾಯಿತು. ಅಸ್ಸಾಂ ಮೂಲದ ವ್ಯಕ್ತಿಯೋರ್ವ ಇತ್ತೀಚೆಗೆ ಕಾರೇಕೊಪ್ಪ ಜಂಕ್ಷನ್ನಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಮಿಕ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಪೊಲೀಸರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಇಲ್ಲಿನ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸಭೆಯಲ್ಲಿ ಅಧ್ಯಕ್ಷರು ಒತ್ತಾಯಿಸಿದರು.
ಕಡಿಮೆ ಸಂಬಳಕ್ಕೆ ಹೊರರಾಜ್ಯದ ಕೂಲಿ ಕಾರ್ಮಿಕರ ಕರೆತಂದು ಲೈನ್ಮನೆಯಲ್ಲಿ ಇಟ್ಟುಕೊಳ್ಳುತ್ತಾರೆ. ಅವರ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡುತ್ತಿಲ್ಲ. ಹಲ್ಲೆ, ಕೊಲೆ, ಮಾನಭಂಗದಂತಹ ಕೃತ್ಯಗಳು ನಡೆದಾಗ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡಿ, ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಕೆ.ಕೆ.ಗಣೇಶ್, ಸಲಹೆಗಾರ ಕೆ.ವಿ.ನಂದ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.