ಕನ್ನಡಪ್ರಭ ವಾರ್ತೆ ಮಂಗಳೂರು
ಉದ್ಘಾಟನೆ ನೆರವೇರಿಸಿ ಮಾತನಾಡಿದ ಹಿರಿಯ ವಿದ್ವಾಂಸ ಡಾ.ಪಾದೆಕಲ್ಲು ವಿಷ್ಣು ಭಟ್, ವೈದಿಕ ಪರಂಪರೆಯಿಂದ ಬಂದವರು ಬ್ರಾಹ್ಮಣರು, ಅವರಲ್ಲಿ ಮಂತ್ರಪಾಠದ ಕೊರತೆ ಕಂಡುಬರುತ್ತಿದೆ. ಹಾಗಾಗಿ ಸಮುದಾಯದ ಮಕ್ಕಳಿಗೆ ವೇದಪಾಠ ಬೋಧನೆ ಅತ್ಯಗತ್ಯ. ಆ ಮೂಲಕ ಇರುವ ಕೊರತೆ ನೀಗಬೇಕಾಗಿದೆ ಎಂದರು.
ಉಪನಯನವಾದ ಬಳಿಕ ಪರಂಪರೆಯ ಕ್ರಮದಲ್ಲಿ ಜೀವನ ಮಾಡಲು ಕಲಿಯುವುದೇ ವೇದಪಾಠದ ಉದ್ದೇಶ. ಕಾಮಚಾರ, ಕಾಮವಾದ ಹಾಗೂ ಕಾಮಭಕ್ಷಣ ಎಂದರೆ ಬೇಕ ಬೇಕಾದ್ದನ್ನು ಮಾಡುವುದು, ಬಯಸಿದ್ದೆಲ್ಲವನ್ನೂ ಮಾತನಾಡುವುದು, ಬೇಕುಬೇಕಾದ್ದೆಲ್ಲ ತಿನ್ನುವುದು, ಈ ತ್ರಿದೋಷ ಬಿಟ್ಟು ಸ್ವಯಂ ಬದುಕಿಗಾಗಿ ನಿಯಮಗಳನ್ನು ರೂಪಿಸಿಕೊಳ್ಳುವ ಅಗತ್ಯವಿದೆ, ಅದಕ್ಕೆ ಗುರುಕುಲ ಮಾದರಿಯಲ್ಲಿ ನಡೆಯುವ ಈ ವೇದಪಾಠ ಶಾಲೆಯು ವಿದ್ಯಾರ್ಥಿಗಳಲ್ಲಿ ಶ್ರದ್ಧೆ ಮೇಧೆ ಹಾಗು ಪ್ರಜ್ಞೆಯನ್ನು ಮೂಡಿಸಲಿ ಎಂದು ಹಾರೈಸಿದರು.ಮಂಗಳೂರು ಕೆಎಂಸಿಯ ಮೆಡಿಸಿನ್ ವಿಭಾಗದ ಪ್ರೊಫೆಸರ್ ಡಾ. ಚಕ್ರಪಾಣಿ ಮಾತನಾಡಿ, ಶಾಲೆಯಲ್ಲಿ ಸಿಕ್ಕುವ ಪಾಠ ಕೇವಲ ವ್ಯಾವಹಾರಿಕ ಹಾಗೂ ಲೌಖಿಕವಾದದ್ದು. ಆದರೆ ಎಲ್ಲದಕ್ಕೂ ಮೂಲವಾದ ಆಧ್ಯಾತ್ಮಿಕ ಶಿಕ್ಷಣ ಅತ್ಯಗತ್ಯ. ಇಂತಹ ಶಾಲೆ ಬಹಳ ಅಗತ್ಯವಿದೆ. ವೇದಪಾಠ ಕೇವಲ ಕಂಠಪಾಠವಾಗದೆ ಜೀವನ ಪಾಠವಾಗಲಿ ಎಂದು ಹಾರೈಸಿದರು.
ವೇದಪಾಠಶಾಲೆ ಶಿಬಿರ ಸಮಿತಿ ಸಂಚಾಲಕ ಬಾಲಸುಬ್ರಹ್ಮಣ್ಯ ಭಟ್ ಕಬೆಕ್ಕೋಡು ಸ್ವಾಗತಿಸಿದರು. ಕೋಶಾಧಿಕಾರಿ ರಮೇಶ್ ಭಟ್ ನೂಜಿಬೈಲು ಪ್ರಸ್ತಾಪಿಸಿದರು. ಕಾರ್ಯದರ್ಶಿ ಬಾಲಕೃಷ್ಣ ಭಟ್ ಬಾಯಾಡಿ ವಂದಿಸಿದರು. ಶ್ರೀಕೃಷ್ಣ ನೀರಮೂಲೆ ಕಾರ್ಯಕ್ರಮ ನಿರೂಪಿಸಿದರು.