ಉತ್ಸವಗಳ ಮೂಲಕ ದೈನಂದಿನ ಜಂಜಾಟಗಳಿಗೆ ಮುಕ್ತಿ: ಸಭಾಪತಿ ಬಸವರಾಜ ಹೊರಟ್ಟಿ

KannadaprabhaNewsNetwork |  
Published : Dec 26, 2025, 02:15 AM IST
ಹೊರಟ್ಟಿ ಮರಳು ಶಿಲ್ಪ ರಚನೆಗೆ ಚಾಲನೆ ನೀಡಿದರು | Kannada Prabha

ಸಾರಾಂಶ

ಜಿಲ್ಲಾಡಳಿತದ ವತಿಯಿಂದ ಪ್ರತಿ ಬಾರಿಯೂ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುತ್ತದೆ.

ಮರುಳು ಶಿಲ್ಪ ರಚನೆ ಮತ್ತು ಗಾಳಿಪಟ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ ಕಾರವಾರ

ಸಾರ್ವಜನಿಕರು ತಮ್ಮ ದೈನಂದಿನ ಬದುಕಿನಲ್ಲಿ ಪ್ರತಿ ದಿನವೂ ಅನೇಕ ಒತ್ತಡದ ಕೆಲಸಗಳಲ್ಲಿ ತೊಡಗುತ್ತಿದ್ದು, ಕರಾವಳಿ ಉತ್ಸವದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸಾರ್ವಜನಿಕರು ತಮ್ಮ ದಿನ ನಿತ್ಯದ ಬದುಕಿನ ಜಂಜಾಟಗಳಿಂದ ನೆಮ್ಮದಿ ಪಡೆದುಕೊಳ್ಳಲು ಸಾಧ್ಯ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಗುರುವಾರ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಕರಾವಳಿ ಉತ್ಸವ -2025 ರ ಅಂಗವಾಗಿ ಆಯೋಜಿಸಲಾದ ಮರುಳು ಶಿಲ್ಪ ರಚನೆ ಮತ್ತು ಗಾಳಿಪಟ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾನು 1986 ರಿಂದ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು, ಜಿಲ್ಲಾಡಳಿತದ ವತಿಯಿಂದ ಪ್ರತಿ ಬಾರಿಯೂ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುತ್ತದೆ. ಇಲ್ಲಿನ ಜನರ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಆದ್ದರಿಂದ ಉತ್ತರ ಕನ್ನಡ ಜಿಲ್ಲೆಗೆ ತಮ್ಮ ನಿಧಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನೀಡಲಾಗುವುದು ಎಂದರು.

ಕಾರವಾರದಲ್ಲಿ ಕರಾವಳಿ ಉತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಈ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು, ತಮ್ಮ ಮನೆ ಉತ್ಸವದ ರೀತಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಉತ್ಸವದಲ್ಲಿ ಭಾಗವಹಿಸಬೇಕು ಮತ್ತು ಈ ಉತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಓ ಡಾ. ದಿಲೀಶ್ ಶಶಿ, ಪೊಲೀಸ್ ವರಿಷ್ಠ ದೀಪನ್ ಎಂ.ಎನ್., ಪ್ರೋಬೇಷನರಿ ಐಎಎಸ್ ಅಧಿಕಾರಿ ಝೂಪಿಶಾನ್ ಹಕ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುನೀಲ್ ಅಂಕೋಲೆಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಲಾಸ್ ಒಡೆದು ಕೆಳಕ್ಕೆ ಹಾರಿ ಜೀವ ಉಳಿಸಿಕೊಂಡ ವಿಜಯ ಭಂಡಾರಿ
ಗದಗ ಜಿಲ್ಲೆಯಲ್ಲಿ ಸಂಭ್ರಮದ ಕ್ರಿಸ್‌ಮಸ್, ಸಹಬಾಳ್ವೆ ಮೆರಗು!