ಕನ್ನಡಪ್ರಭ ವಾರ್ತೆ ಸೇಡಂ
ಪಟ್ಟಣದ ಸರಕಾರಿ ನೌಕರರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಸೇಡಂ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತ ಲಿ. ಬಿ.ಮಹಾದೇವಪ್ಪ ಸ್ಮರಣೆಯಲ್ಲಿ ಮಾಧ್ಯಮ ಶಕ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಪತ್ರಕರ್ತರು ತಪ್ಪುಗಳ್ನು ಸರಿಪಡಿಸುವುದರ ಜತೆಗೆ ಸಮಾಜದ ಅಭಿವೃದ್ಧಿ, ಏಳ್ಗೆಯ ಬಗ್ಗೆಯೂ ಗಮನಹರಿಸುವ ಕೆಲಸ ಮಾಡಬೇಕು. ಪತ್ರಕರ್ತರ ಪೆನ್ನಿಗೆ ಬಹಳಷ್ಟು ಶಕ್ತಿ ಇದೆ. ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳು ಸೇರಿದಂತೆ ಪ್ರತಿಯೊಂದು ಆಯಾಮಗಳನ್ನು ರಚನಾತ್ಮಕವಾಗಿ ರಚಿಸಿ, ಅವರುಗಳ ಆಶೋತ್ತರಗಳಿಗೆ ಸ್ಪಂದಿಸುವ ಕೊಂಡಿಯ ರೀತಿಯಲ್ಲಿ ಮಾಧ್ಯಮಗಳು ಕೆಲಸ ಮಾಡುತ್ತಿವೆ. ಸಾಮಾಜಿಕ ಜಾಲತಾಣ ಸಾಕಷ್ಟು ತೀವ್ರ ಬೆಳವಣಿಗೆ ಕಂಡಿದ್ದು ಮಾಧ್ಯಮ ಕ್ಷೇತ್ರ ಇನ್ನಷ್ಟು ಆಧುನೀಕರಣಗೊಳ್ಳುವ ಅಗತ್ಯವಿದೆ ಎಂದರು.ಈ ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ಪತ್ರಕರ್ತರಿಗೆ ಉಚಿತ ಬಸ್ ಮತ್ತು ಇನ್ನಿತರ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಹಾಗೆಯೇ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಕಟ್ಟಡ ನಿರ್ಮಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ದೇವೇಂದ್ರಪ್ಪ ಅವಂಟಿ, ಪ್ರಶಸ್ತಿ ಪುರಸ್ಕೃತ ರಶ್ಮಿ ಎಸ್ ಮಾತನಾಡಿದರು. ಪತ್ರಕರ್ತರ ಸಂಘದ ಜಿಲ್ಲಾ ಪ್ರ. ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಶಂಕರಯ್ಯಸ್ವಾಮಿ ಇಮಡಾಪೂರ, ಪ್ರಶಸ್ತಿ ಪುರಸ್ಕೃತ ಜಯತಿರ್ಥ ಪಾಟೀಲ್ ವೇದಿಕೆಯಲ್ಲಿದ್ದರು.
ಪತ್ರಕರ್ತರಾದ ನಾಗಯ್ಯಸ್ವಾಮಿ ಬೊಮ್ನಳ್ಳಿ, ಶರಣಯ್ಯಸ್ವಾಮಿ ಬೊಮ್ನಳ್ಳಿ, ಅವಿನಾಶ ಬೊರಂಚಿ, ಸಿದ್ದಲಿಂಗಯ್ಯಸ್ವಾಮಿ ಮಲಕೂಡ, ಶರಣಪ್ಪ ಎಳ್ಳಿ, ರಾಧಾಕೃಷ್ಣ, ಸುನೀಲ ರಾಣಿವಾಲ, ಶಫೀಕ, ಮಹಾಂತಯ್ಯಸ್ವಾಮಿ ಆಡಕಿ ಇದ್ದರು.ಮಾಧ್ಯಮ ಶಕ್ತಿ ಪ್ರಶಸ್ತಿ ಪ್ರದಾನ