ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ಹಳೇಹುಬ್ಬಳ್ಳಿಯಲ್ಲಿ ಭಾನುವಾರ ನಡೆದಿದೆ.
ರಾಜೇಶಕುಮಾರ್ ಭಾನುವಾರ ಮದ್ಯದ ಅಮಲಿನಲ್ಲಿ ಮಿತಿಲೇಶಕುಮಾರನೊಂದಿಗೆ ಜಗಳ ತೆಗೆದು, ಅವರ ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಾನೆ. ಬಳಿಕ ಜಗಳ ವಿಕೋಪಕ್ಕೆ ಹೋಗಿ ರಾಜೇಶಕುಮಾರ ಮಿತಿಲೇಶನಿಗೆ ಮೈಕ್ ಸೆಟ್ನಿಂದ ತಲೆಗೆ ಹೊಡೆದಿದ್ದಾನೆ. ಪರಿಣಾಮ ಮಿತಿಲೇಶ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದ್ದ. ಈ ವೇಳೆ ಸ್ಥಳೀಯರು ಕೆಎಂಸಿಆರ್ಐಗೆ ರವಾನಿಸಲು ಯತ್ನಿಸಿದರು. ಆದರೆ, ಮಾರ್ಗಮಧ್ಯದಲ್ಲಿ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಮಿತಿಲೇಶಕುಮಾರ ಬಿಹಾರದವನು ಮತ್ತು ಕೊಲೆಗೈದ ರಾಜೇಶ್ ಹರಿಯಾಣದವನು ಈ ಇಬ್ಬರೂ ಸ್ನೇಹಿತರಾಗಿದ್ದು, ಅಂಗವೈಕಲ್ಯ ಹಿನ್ನೆಲೆಯಲ್ಲಿ ಇಲ್ಲಿನ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.ಶವಾಗಾರಕ್ಕೆ ಕಮೀಷನರ್ ಭೇಟಿ: ಕೆಎಂಸಿಆರ್ಐ ಶವಾಗಾರಕ್ಕೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ, ಡಿಸಿಪಿ ಮಹಾನಿಂಗ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ, ಘಟನೆ ಬಗ್ಗೆ ಹಳೇಹುಬ್ಬಳ್ಳಿ ಠಾಣೆ ಪೊಲೀಸರಿಂದ ಮಾಹಿತಿ ಪಡೆದರು.
ಕುಟುಂಬಸ್ಥರು ಹಬ್ಬದ ನಿಮಿತ್ತ ಊರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಇಬ್ಬರ ಮಧ್ಯೆ ಜಗಳ ಶುರುವಾಗಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಶಕುಮಾರನನ್ನು ವಶಕ್ಕೆ ಪಡೆಯಲಾಗಿದೆ. ಹಳೇ ಹುಬ್ಬಳ್ಳಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಹೇಳಿದರು.