ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಐಒಸಿ ಬಳಿಯ ಮಹಾಲ ಬಾಗಾಯತ ಕೈಗಾರಿಕೆ ಪ್ರದೇಶದಲ್ಲಿ ಶುಕ್ರವಾರ ನಡೆದ ಮೇ.ರಜನಿ ಸ್ಟೀಲ್ ವರ್ಕ್ಸ್ 29ನೇ ವರ್ಷದ ಸಂಭ್ರಮಾಚರಣೆ, ಕನ್ನಡ ರಾಜ್ಯೋತ್ಸವ ಮತ್ತು ಸ್ನೇಹಜೀವಿ ಡಾ.ಗಂಗಾಧರ ಸಂಬಣ್ಣಿ ಅವರ 50ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟ್ರೇಲರ್ಗಳು ಎಲ್ಲ ಕಂಪನಿಯ ಟ್ರ್ಯಾಕ್ಟರ್ಗಳೊಂದಿಗೆ ಹೊಂದಾಣಿಕೆಯಾಗುತ್ತವೆ. ಅದೇ ರೀತಿ ಡಾ.ಗಂಗಾಧರ ಸಂಬಣ್ಣಿ ಎಲ್ಲ ವಯೋಮಾನದ ಗೆಳೆಯರೊಂದಿಗೆ ಹೊಂದಾಣಿಕೆಯಿಂದಿರು ವ್ಯಕ್ತಿ. ಯಾವಾಗಲೂ ಶಾಂತಚಿತ್ತದಿಂದ ಸಹಬಾಳ್ವೆ ನಡೆಸುವ ನಿಷ್ಕಲ್ಮಷ ಗುಣ ಹೊಂದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ಜನಪರ ವಿಚಾರಗಳಿಗೆ ಬೆಂಬಲ ನೀಡುತ್ತ, ಅಜಾತ ಶತ್ರು ಎನಿಸಿದ್ದಾರೆ. ಅರ್ಧ ಶತಕ ಸಾರ್ಥಕ ಬದುಕು ಸಾಗಿಸಿರುವ ಅವರು ಶತಕ ಬಾರಿಸಲಿ ಎಂದು ಶುಭಹಾರೈಸಿದರು.ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಮಾತನಾಡಿ, ಜೀವನದಲ್ಲಿ ನಗು ಮುಖ್ಯವಾಗಿದ್ದು, ಬದುಕಿಗೆ ಅರ್ಥ ಬರುವಂತೆ ಬದುಕಬೇಕು. ಕಷ್ಟದ ನಡುವೆಯೂ ನಗುವುದೇ ಜೀವನ. ಎಲ್ಲರಿಗೂ ಬೇಕಾಗುವ ರೀತಿಯಲ್ಲಿ, ಪರೋಪಕಾರಿಯಾಗಿ ಸಮಯ ಕಳೆಯಬೇಕು. ಅದರ ಜೊತೆಯಲ್ಲಿಯೇ ಬೆಳೆದು ದೊಡ್ಡವರಾಗಬೇಕು. ನಾನು ಎಂಬುದಕ್ಕಿಂತ ನನ್ನ ಜೊತೆಯಲ್ಲಿ ಇರುವರೊಂದಿಗೆ ಬದುಕುವುದು ಮುಖ್ಯ. ಅದರಲ್ಲೂ ಉದ್ಯಮ ಸ್ಥಾಪಿಸಿ ಮತ್ತೊಬ್ಬರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ. ಡಾ.ಗಂಗಾಧರ ಸಂಬಣ್ಣಿ ಅವರು ಟ್ರೈಲರ್ ಉದ್ಯಮ ಪ್ರಾರಂಭಿಸುವ ಮೂಲಕ ರೈತರ ಪರ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.ಮಾಜಿ ಶಾಸಕ ಪ್ರೊ.ರಾಜು ಆಲಗೂರ ಮಾತನಾಡಿ, ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಮತ್ತು ಪರೋಪಕಾರ ಗುಣ ನಮ್ಮನ್ನು ಉನ್ನತ ಸ್ಥಾನದಲ್ಲಿರಿಸುತ್ತದೆ. ತಮ್ಮ ಜೀವನದಲ್ಲಿ ಯಾರಿಗೂ ನೋಯಿಸದ ಮತ್ತು ಯಾವುದೇ ವ್ಯಕ್ತಿಯ ಹಿಂದೆಯೂ ಯಾವುದೇ ಟೀಕೆ ಮಾಡದ ಸರಳ ಸಜ್ಜನ ವ್ಯಕ್ತಿಯಾಗಿರುವ ಡಾ.ಗಂಗಾಧರ ಸಂಬಣ್ಣಿ ಅವರ ಜೀವನ ಮಾದರಿಯಾಗಿದೆ ಎಂದರು.ಡಾ.ಮಹಾಂತೇಶ ಬಿರಾದಾರ ಮಾತನಾಡಿ, ಸನ್ಮಾರ್ಗದಲ್ಲಿ, ಸಚ್ಚಾರಿತ್ರ್ಯದಿಂದ ಜನಮಾನಸದೊಂದಿಗೆ 50 ವರ್ಷ ಬದುಕು ಸಾಗಿಸುವುದು ಇಂದಿನ ದಿನಗಳಲ್ಲಿ ಸವಾಲಾಗಿದೆ. ಡಾ.ಸಂಬಣ್ಣಿ ವ್ಯವಹಾರದಲ್ಲಿ ಏಕಾಗ್ರತೆಯಿಂದ ಮುಂದುವರೆದಿದ್ದರೇ ಬೃಹತ್ ಉದ್ಯಮಿಯಾಗುತ್ತಿದ್ದರು. ಮುಗ್ದ ಸ್ವಭಾವದ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಇಂದಿನ ದಿನಗಳಲ್ಲಿ ಸ್ಥಿರಾಸ್ಥಿಗಳಿಗಿಂತ ಗೆಳೆತನವೇ ಶಾಶ್ವತ ಆಸ್ತಿಯಾಗಿದೆ. ಕಷ್ಡ, ಸುಖಗಳಲ್ಲಿ ಗೆಳೆತನದಿಂದಲೇ ತಕ್ಷಣ ಸ್ಪಂದನೆ ಸಿಗುತ್ತದೆ ಎಂದು ತಿಳಿಸಿದರು.ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿದರು. ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಡಾ.ಗಂಗಾಧರ ಸಂಬಣ್ಣಿ ಪತ್ನಿ ಭಾಗ್ಯಶ್ರೀ, ಸಹೋದರ ಚಿದಾನಂದ ಸಂಬಣ್ಣಿ, ಪೀಟರ್ ಅಲೆಕ್ಸಾಂಡರ್, ಗುರುನಾಥ ಕಾಪಸೆ ಮುಂತಾದವರು ಉಪಸ್ಥಿತರಿದ್ದರು.