ಶಿವಾನಂದ ಗೊಂಬಿ
ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿನ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ದೋಸ್ತಿ ನಿಭಾಯಿಸುತ್ತಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧವೇ ಜೆಡಿಎಸ್ ರಾಜ್ಯ ವಕ್ತಾರ ಆರೋಪ ಮಾಡಿರುವುದು ಎರಡು ಪಕ್ಷಗಳಲ್ಲಿನ ಮೈತ್ರಿಯಲ್ಲಿ ಬಿರುಕು ಮೂಡಿಸಿದೆ. ಇದು ಜಿಲ್ಲೆಯ ರಾಜಕಾರಣದಲ್ಲಿ ಸಂಚಲನವನ್ನುಂಟು ಮಾಡಿದೆ.
ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದು ಎರಡು ಪಕ್ಷಗಳ ಮೈತ್ರಿಯಲ್ಲಿ ಬಿರುಕು ಮೂಡಿದೆ ಎಂಬುದು ಗೋಚರವಾಗಿತ್ತು. ಬಳಿಕ ದೆಹಲಿ ಮಟ್ಟದಲ್ಲಿ ಕುಮಾರಸ್ವಾಮಿ ಅವರಲ್ಲಿನ ಅಸಮಾಧಾನವನ್ನು ಶಮನಗೊಳಿಸಿದ್ದರು ಬಿಜೆಪಿಗರು.ಇದೀಗ ಲೋಕಲ್ನಲ್ಲೂ ಜಗಳ:
ಇನ್ನು ಕಳೆದ ವಾರವಷ್ಟೇ ನಡೆದ ಅಖಿಲ ಭಾರತ ವೀರಶೈವ ಮಹಾಸಭಾದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುರಾಜ ಹುಣಸಿಮರದ ಕಣಕ್ಕಿಳಿದಿದ್ದರು. ಆಗ ಬೆಲ್ಲದ ಬೇರೆ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಇದರಿಂದ ಹುಣಸಿಮರದ ಸೋಲನ್ನುಭವಿಸಬೇಕಾಯಿತು ಎಂಬುದು ಜೆಡಿಎಸ್ ಆರೋಪ. ಇದೀಗ ಅದಕ್ಕೆ ಪ್ರತಿಕಾರವಾಗಿ ಹುಣಸಿಮರದ ಬೆಲ್ಲದ ವಿರುದ್ಧ ಆರೋಪ ಮಾಡುತ್ತಿದ್ದಾರೆ.
ಏನಾಗುತ್ತೋ ಏನೋ?
ಆದರೆ ಇದಕ್ಕೆ ಹುಣಸಿಮರದ, ಮೈತ್ರಿ ಮಾಡಿಕೊಳ್ಳುವ ಮುನ್ನವೇ ಬೆಲ್ಲದ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ವಿಷಯವನ್ನು ಟೀಕಿಸಿದ್ದೇನೆ. ಮೈತ್ರಿಗೂ ನನ್ನ ಹೇಳಿಕೆಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯ ವಿಷಯವನ್ನು ಈಗ ಪ್ರಸ್ತಾಪಿಸಿ ಟೀಕೆ ಮಾಡುತ್ತಿರುವುದು ಚರ್ಚೆಗೆ ಗ್ರಾಸವನ್ನುಂಟು ಮಾಡಿರುವುದಂತೂ ಸತ್ಯ.ನಾನು ಆರೋಪಿಸಿರುವುದಕ್ಕೆ ಹಾಗೂ ಮೈತ್ರಿಗೂ ಯಾವುದೇ ಬಗೆಯ ಸಂಬಂಧವಿಲ್ಲ. ಪಕ್ಷಗಳ ಬಗ್ಗೆ ನಾನೇನು ಹೇಳಿಕೆ ನೀಡಿಲ್ಲ. ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ಅರವಿಂದ ಬೆಲ್ಲದ ಅವರ ವಿರುದ್ಧ ಆರೋಪ ಮಾಡಿದ್ದೇನೆ. ಇದರಲ್ಲಿ ಮೈತ್ರಿ ಬಗ್ಗೆ ಬಿರುಕು ಮೂಡಿದೆ ಎಂದ್ಹೇಳುವುದು ಸರಿಯಲ್ಲ. ನನ್ನ ಹೇಳಿಕೆಯಿಂದ ಮೈತ್ರಿಗೆ ಯಾವುದೇ ಧಕ್ಕೆಯುಂಟಾಗುವುದಿಲ್ಲ ಎಂದು ಜೆಡಿಎಸ್ ರಾಜ್ಯ ವಕ್ತಾರ ಗುರುರಾಜ ಹುಣಸಿಮರದ ಹೇಳಿದ್ದಾರೆ.