ಕನ್ನಡಪ್ರಭ ವಾರ್ತೆ ಮಡಿಕೇರಿ
ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಬಾಣ ಪ್ರಯೋಗಿಸಿದರು.
ಗೋವಿಂದ.. ಗೋವಿಂದ.. ಎಂದು ಕೂಗುತ್ತಲೇ ಖಾಲಿ ಚೊಂಬು, ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿದರು.ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನೂ ತರಲು ಸಾಧ್ಯವಾಗಿಲ್ಲ. ಇವರು ದಿನ ಬೆಳಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಿದ್ದಾರೆ ಹೊರತು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲ ಎಂದು ಟೀಕಿಸಿದರು.ಕೇಂದ್ರ ಸರ್ಕಾರವು ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದ್ದರು. ಆದರೆ ಅದಕ್ಕೆ ಸ್ಪಂದನೆ ದೊರೆತಿಲ್ಲ. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ 14 ಲಕ್ಷ ಕೋಟಿ ಇತ್ತು. ಈ ಬಾರಿಯ ಬಜೆಟ್ ಗಾತ್ರ 50 ಲಕ್ಷ ಕೋಟಿ ದಾಟಿದೆ. 16 ಲಕ್ಷ ಕೋಟಿ ಸಾಲ ತೆಗೆದುಕೊಂಡಿದ್ದಾರೆ. 1947ರಿಂದ 2014ರ ವರೆಗೆ ನಮ್ಮ ದೇಶ ಮಾಡಿದ್ದ ಸಾಲ 53 ಲಕ್ಷ ಕೋಟಿ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 10 ವರ್ಷಗಳಲ್ಲಿ ಸಾಲದ ಪ್ರಮಾಣ 205 ಲಕ್ಷ ಕೋಟಿಯಾಗಿದೆ ಎಂದು ದೂರಿದರು.
ಕೊಡಗಿಗೆ ರೈಲ್ವೆ ಸಂಪರ್ಕಕ್ಕೆ 1854 ಕೋಟಿ ಎಂದು ಹಿಂದೆ ಘೋಷಿಸಲಾಗಿದ್ದರೂ, ಒಂದು ಪೈಸೆಯನ್ನು ಕೇಂದ್ರ ಒದಗಿಸಿಲ್ಲ. ರೈಲ್ವೆಗೆ ಸಂಬಂಧಿಸಿದ ಸರ್ವೇ ನಡೆದಿದೆ ಎನ್ನಲಾಗುತ್ತದೆಯಾದರು, ಅದಕ್ಕೂ ಪುರಾವೆಗಳಿಲ್ಲ. ಮಡಿಕೇರಿಯಲ್ಲಿ ಏರ್ ಸ್ಟ್ರಿಪ್ ಮಾಡುತ್ತೇವೆ ಎನ್ನುವ ವಿಚಾರಗಳಿಗೂ ಇಂದು ಬೆಲೆ ಇಲ್ಲದಾಗಿದೆ. ಈ ಕ್ಷೇತ್ರದ ಸಂಸದರು ಸ್ಥಳೀಯ ಮುಖಂಡರನ್ನು ಕಾಫಿ ಸಮಸ್ಯೆ ಬಗೆಹರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿಸಿದ್ದಾರಾದರೂ, ಸಮಸ್ಯೆಗೆ ಪರಿಹಾರ ಬಜೆಟ್ನಲ್ಲಿ ಬಂದಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
--------------------------
ಸುಳ್ಳು ಹೇಳುವುದರಲ್ಲಿ ಬಿಜೆಪಿಯನ್ನೇ ಹಿಂದಿಕ್ಕಿದ್ದಾರೆ ಕುಮಾರಸ್ವಾಮಿ: ಲಕ್ಷ್ಮಣ್ಸುಳ್ಳು ಹೇಳುವ ಪ್ರವೃತ್ತಿಯನ್ನು ಬೆಳೆಸಿಕೊಂಡಿರುವ ಕುಮಾರಸ್ವಾಮಿ, ಬಿಜೆಪಿಯನ್ನೇ ಓವರ್ ಟೇಕ್ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಟೀಕಿಸಿದ್ದಾರೆ.ಕುದುರೆಮುಖ ಕಬ್ಬಿಣ ಮತ್ತು ಅದಿರು ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರದಿಂದ ಷಡ್ಯಂತ್ರ ನಡೆಯುತ್ತಿದೆ ಎಂಬ ಎಚ್ಡಿಕೆ ಹೇಳಿಕೆ ವಿಚಾರ ಕುರಿತು ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಲ್ಲು ಹಾಕುತ್ತಿದ್ದೇವೆ ಎನ್ನುವುದಕ್ಕೆ ಏನಾದರೂ ಸಾಕ್ಷ್ಯಗಳಿದ್ದರೆ ಹೇಳಿ ಸ್ವಾಮಿ ಎಂದರು.ನೀವು ಎರಡು ಬಾರಿ ಸಿಎಂ ಆಗಿದ್ರಿ, ನಿಮ್ಮ ತಂದೆ ಪ್ರಧಾನ ಮಂತ್ರಿಗಳಾಗಿದ್ದರು, ಇದೀಗ ನೀವು ಭಾರಿ ಕೈಗಾರಿಕೆ ಸಚಿವರಾಗಿದ್ದೀರ, ರಾಜ್ಯಕ್ಕೆ ಕೈಗಾರಿಕೆಗಳನ್ನು ತರುತ್ತೀರಾ, ಉದ್ಯೋಗ ಕೊಡ್ತೀರ ಅಂದರೆ ಯಾರಾದ್ರೂ ಕಲ್ಲು ಹಾಕುತ್ತಾರಾ ಎಂದು ಪ್ರಶ್ನಿಸಿದ ಅವರು, ನೀವು ಬಿಜೆಪಿಯವರಗಿಂತ ಹೆಚ್ಚು ಸುಳ್ಳು ಹೇಳುತ್ತಿದ್ದೀರಾ, ಸುಳ್ಳು ಹೇಳುವುದರಲ್ಲಿ ಬಿಜೆಪಿಯವರನ್ನು ಓವರ್ ಟೇಕ್ ಮಾಡುತ್ತಿದ್ದೀರಾ, ಈ ರೀತಿ ಸುಳ್ಳು ಹೇಳುವ ಪ್ರವೃತ್ತಿಯನ್ನು ಬೆಳೆಸಿಕೊಂಡಿರುವ ನೀವು ಹೇಳುತ್ತಿರುವುದು ಕುಣಿಯಲಾರದವಳು ನೆಲ ಡೊಂಕು ಎಂದರಂತೆ ಆಗಿದೆ ಎಂದು ವ್ಯಂಗ್ಯವಾಡಿದರು.