ಭಟ್ಕಳ: ಚಾತುರ್ಮಾಸ ವ್ರತಾಚರಣೆಯಿಂದ ಅನೇಕ ಉಪಯುಕ್ತತೆಗಳಿದ್ದು, ಇದರಲ್ಲಿ ಧರ್ಮ ಮತ್ತು ಸಾತ್ವಿಕ ಶಕ್ತಿಯ ಜಾಗೃತಿ ಮಹತ್ವದ್ದು ಎಂದು ಧರ್ಮಸ್ಥಳದ ಉಜಿರೆಯ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ ಪೂಂಜಾ, ಭಟ್ಕಳದಲ್ಲಿ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಶ್ರೀಗಳ ಚಾತುರ್ಮಾಸ್ಯ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಇಂತಹ ಪುಣ್ಯ ಕಾರ್ಯವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಚಾತುರ್ಮಾಸ್ಯ ಸ್ವಾಗತ ಸಮಿತಿಯ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ವ್ರತಾಚರಣೆ ಪ್ರಪ್ರಥಮವಾಗಿ ನಡೆಯುತ್ತಿದೆ. ಇಂತಹ ಪುಣ್ಯದ ಕಾರ್ಯಕ್ರಮದಲ್ಲಿ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಚಾತುರ್ಮಾಸ್ಯ ವ್ರತಾಚರಣೆಯನ್ನು ಕಣ್ತುಂಬಿಕೊಳ್ಳುವುದರ ಜತೆಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದರು.ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸ ಕೇಶವ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಅಯೋಧ್ಯೆಯ ಕೇಶವದಾಸ ಮಹಾಂತ, ಮಾಜಿ ಶಾಸಕ ಜೆ.ಡಿ. ನಾಯ್ಕ, ವಿಧಾನಪರಿಷತ್ ಸದಸ್ಯ ಹರೀಶಕುಮಾರ, ಭಟ್ಕಳ ಗುರುಮಠದ ಅಧ್ಯಕ್ಷ ಅರುಣ ನಾಯ್ಕ, ಶಿರಾಲಿ ಸಾರದಹೊಳೆ ದೇವಸ್ಥಾನದ ಅಧ್ಯಕ್ಷ ಆರ್.ಕೆ. ನಾಯ್ಕ, ಮೊಕ್ತೇಸರ ಸುಬ್ರಾಯ ನಾಯ್ಕ, ಹಿರಿಯ ಮುಖಂಡರಾದ ಎಲ್.ಎಸ್. ನಾಯ್ಕ, ಡಿ.ಬಿ. ನಾಯ್ಕ, ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ, ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಈಶ್ವರ ನಾಯ್ಕ, ಗೋವಿಂದ ನಾಯ್ಕ, ಮಂಜುನಾಥ ನಾಯ್ಕ ಕುಮಟಾ, ವಾಮನ ನಾಯ್ಕ ಮುಂತಾದವರಿದ್ದರು.
ಕಾರ್ಯಕ್ರಮದಲ್ಲಿ ಭಟ್ಕಳ ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಬ್ರಹ್ಮಾನಂದ ಶ್ರೀಗಳ ಪುರಪ್ರವೇಶದ ಮೆರವಣಿಗೆ ನಡೆಯಿತು.