ಕನ್ನಡಪ್ರಭ ವಾರ್ತೆ ಮಂಡ್ಯ
ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ೨೧ ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಭವ ಲಿಂಗ, ಸಹಸ್ರಲಿಂಗಗಳನ್ನು ವೀಕ್ಷಣೆಗೆ ತೆರೆದಿಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹಾ ಶಿವರಾತ್ರಿ ಪ್ರಯುಕ್ತ ನಿರಾಕಾರ ಜ್ಯೋತಿ ಸ್ವರೂಪದ ಶಿವಪರಮಾತ್ಮನ ೨೧ ಅಡಿ ಎತ್ತರದ ಆಕರ್ಷಕ ಶಿವಲಿಂಗ ಪ್ರತಿಷ್ಠಾಪನೆ ಹಾಗೂ ಧಾರಾಪಾತ್ರೆಯಿಂದ ನಿತ್ಯಾಭಿಷೇಕ ನಡೆಯಲಿದೆ. ಭಾರತ ಭವಿಷ್ಯದಲ್ಲಿ ವಿಶ್ವಗುರುವಾಗಲಿದ್ದು ಶಿವನ ಮೂಲಕ ರಚಿಸಲ್ಪಡುತ್ತಿರುವ ಸ್ವರ್ಗ, ಪ್ಯಾರಡೈಸ್, ಬಹಿಸ್ತನ ಕಿರುದರ್ಶನ ಮಾಡುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಗುವುದು ಎಂದರು.ಅತ್ಯಾಕರ್ಷಕ ಭಾರತದ ಸುಪ್ರಸಿದ್ಧ ೧೨ ದ್ವಾದಶ ಜ್ಯೋತಿರ್ಲಿಂಗಗಳನ್ನು ಒಳಗೊಂಡ ಉದ್ಭವಲಿಂಗದ ದರ್ಶನ, ಪ್ರಾಪಂಚಿಕ ಕೆಲಸ ಕಾರ್ಯದಲ್ಲಿ ವ್ಯಸ್ತನಾಗಿ ತನ್ನನ್ನು ತಾನು ಮರೆತುಹೋಗಿರುವ ಮನುಷ್ಯ ರಾಜಯೋಗದ ಧ್ಯಾನದ ಮೂಲಕ ಈ ಎಲ್ಲಾ ಸಮಸ್ಯೆಗಳ ಸುಳಿಯಿಂದ ಹೇಗೆ ಹೊರಬರಲು ಸಾಧ್ಯ ಎಂಬುದರ ಬಗ್ಗೆ ಅರಿವು ಮೂಡಿಸುವ ಚಿತ್ರಣವನ್ನು ತೆರೆದಿಡುವುದಾಗಿ ಹೇಳಿದರು.
ಒಂದೇ ಸ್ಥಳದಲ್ಲಿ ನಿಂತು ಏಕಕಾಲಕ್ಕೆ ಸಹಸ್ರಲಿಂಗ ದರ್ಶನ ಮಾಡುವ ಸುವರ್ಣವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ. ಈಶ್ವರೀಯ ವಿದ್ಯಾಲಯವು ಕಳೆದ ೯೦ ವರ್ಷಗಳಿಂದ ೨೦ ವಿಭಾಗಗಳಲ್ಲಿ ಸಲ್ಲಿಸುತ್ತಿರುವ ವಿಶ್ವಸೇವೆಯ ಬಗ್ಗೆ ವೀಡಿಯೋ ತುಣುಕುಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ಹೇಳಿದರು. ಗೋಷ್ಠಿಯಲ್ಲಿ ವಿಜಯಲಕ್ಷ್ಮೀ ಇದ್ದರು.ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಆ ದಿನದಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಶ್ರೀರಂಗಪಟ್ಟಣ ಸಮೀಪವಿರುವ ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆಯ ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜನ್ನು ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ. ಆದ ಕಾರಣ ಫೆ.11 ರಂದು ಮಂಡ್ಯ ನಗರಕ್ಕೆ ನೀರನ್ನು ಪಂಪು ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಮಂಡ್ಯ ನಗರ ಸಾರ್ವಜನಿಕರಿಗೆ ಫೆ.11 ಮತ್ತು 12 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.