ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ನಗರ ಪಾಲಿಕೆ ವತಿಯಿಂದ ಗನ್ ಹೌಸ್ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮತದಾರನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು ಎಂದರು.ಪ್ರಸ್ತುತ ಯುವಜನರು ಮತದಾನ ಎಂದರೆ ಹಿಂಜರಿಯುವುದುಂಟು. ಹಾಗಾಗಿ ಅವರಿಗೆ ಮತದಾನದ ಮಹತ್ವವನ್ನು ತಿಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದರು.
ಚುನಾವಣಾ ಅಕ್ರಮಗಳನ್ನು ತಡೆಯುವುದು ಕೇವಲ ಅಧಿಕಾರಿಗಳಿಗೆ ಸೀಮಿತವಾಗಿಲ್ಲ. ಬದಲಾಗಿ ಪ್ರತಿಯೊಬ್ಬ ವ್ಯಕ್ತಿಯು ನಮ್ಮೊಂದಿಗೆ ಕೈಜೋಡಿಸಿ ಚುನಾವಣಾ ಅಕ್ರಮ ಕಂಡುಬಂದರೆ ಸಿ ವಿಜಿಲ್ ಆಪ್ ನಲ್ಲಿ ವಿಡಿಯೋ, ಆಡಿಯೋ, ಫೋಟೋ ಹಾಗೂ ಜಿ.ಪಿ.ಎಸ್ ಮೂಲಕ ಮಾಹಿತಿ ನೀಡಿ ಅಕ್ರಮ ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.ನಗರ ಪೊಲೀಸ್ ಆಯುಕ್ತ ಬಿ. ರಮೇಶ್, ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ. ಗಾಯಿತ್ರಿ, ಎಸ್ಪಿ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತೆ ಎನ್.ಎನ್. ಮಧು ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.