ಶಿವಮೊಗ್ಗ: ನಗರದ ನವುಲೆಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಆಯೋಜಿಸಿರುವ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರಮೇಳದ ಎರಡನೇ ದಿನ ಭಾನುವಾರ ಗ್ರಾಹಕರ ಕಣ್ಮನ ಸೆಳೆಯಿತು. ಭಾನುವಾರ ರಜೆ ದಿನವಾಗಿರುವ ಕಾರಣ ಹಣ್ಣುಗಳು ಮತ್ತು ಆಹಾರಮೇಳದತ್ತ ಜನರು ಜಮಾಯಿಸಿದ್ದರು.
ಮುಖ್ಯವಾಗಿ ಈ ಮೇಳವು ರೈತರು, ವ್ಯಾಪಾರಿಗಳು, ರಫ್ತುದಾರರು, ಸರ್ಕಾರಿ ಅಧಿಕಾರಿಗಳು ಮತ್ತು ಇನ್ನಿತರ ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿ ಆಗಲು, ಸಂಪರ್ಕ ಹೊಂದಲು ಒಳ್ಳೆಯ ವೇದಿಕೆಯಾಗಿದೆ.
ಅಲ್ಲದೆ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಆವರಣದ ಪ್ರಾತ್ಯಕ್ಷಿಕೆಯ ತಾಕುಗಳಾದ ಸಮಗ್ರ ಕೃಷಿ ಪದ್ಧತಿ, ಜೇನು ಸಾಕಾಣಿಕೆ ಘಟಕ, ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ, ಜಲ ಕೃಷಿ (ಹೈಡೋಫೋನಿಕ್ಸ್), ಎರೆಹುಳು ಗೊಬ್ಬರ ತಯಾರಿಕೆ ಘಟಕ, ಕೊಳವೆ ಬಾವಿ ಜಲ ಮರುಪೂರಣ ಮಾದರಿ, ತಾರಸಿ ತೋಟ, ಅಲಂಕಾರಿಕ ಮೀನು ಘಟಕಗಳನ್ನು ಜನರು ಸಂದರ್ಶಿಸುತ್ತಿದ್ದರು.ಹಣ್ಣು ಪ್ರಿಯರಿಗಾಗಿ ಹಣ್ಣುಗಳ ರಾಜನೆಂದೇ ಕರೆಯಲ್ಪಡುವ ಮಾವಿನ ಹಣ್ಣಿನ 30 ವಿಶಿಷ್ಟ ಮಾವಿನ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಕೇಸರ್, ಮಲಗೋವಾ, ಮಲ್ಲಿಕಾ, ನೀಲಂ, ರಸಪುರಿ, ಸಿಂಧೂರ, ತೋತಾಪುರಿ, ಅಪ್ಪೆ ಮಿಡಿ ತಳಿಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, 20 ವಿವಿಧ ಹಲಸಿನ ತಳಿಗಳಾದ ಸಿದ್ದು ಹಲಸು, ಶಂಕರ, ಸರ್ವಋತು, ರುದ್ರಾಕ್ಷಿ. ಕೆಂಪು, ಚಂದ್ರ ಹಲಸು, ಹೆಬ್ಬಾಳ ಸೇರಿದಂತೆ ಸಖರಾಯಪಟ್ಟಣದ ಸ್ಥಳೀಯ ವಿಶೇಷ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮತ್ತು ವಿವಿಧ ತಳಿಯ ಬಾಳೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟಮಾಡಲಾಗುತ್ತಿದೆ.ಬಿಜಾಪುರ, ಬಾಗಲಕೋಟೆ ಮತ್ತಿತರ ಭಾಗಗಳಿಂದ ಥಾಮ್ಸನ್ ಸೀಡ್ಲೆಸ್, ಶರದ್, ಕೃಷ್ಣ ಶರದ್ ಇತ್ಯಾದಿ ತಳಿಯ ರುಚಿಕರ ದ್ರಾಕ್ಷಿ ಹಣ್ಣುಗಳು, ಬೆಂಗಳೂರು ಗ್ರಾಮಾಂತರ ಭಾಗದಿಂದ ಬೆಂಗಳೂರು ಬ್ಲೂ ದ್ರಾಕ್ಷಿ ಹೀಗಾಗಿ ದ್ರಾಕ್ಷಿ ಪ್ರಿಯರಿಗೆ ಬಗೆ ಬಗೆಯ ತಳಿಯ ಹಣ್ಣುಗಳು ಮೇಳದಲ್ಲಿ ಇವೆ.
ವಿಶಿಷ್ಟ ಖಾದ್ಯಗಳು:
8 ಲಕ್ಷ ಸಸಿಗಳು ಲಭ್ಯ :