ಇಂಧನ ಅಭಾವ ವದಂತಿ: ಬಂಕ್‌ಗಳ ಮುಂದೆ ಸರದಿ

KannadaprabhaNewsNetwork |  
Published : Mar 25, 2026, 02:15 AM IST
ನರಗುಂದದ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಇಂಧನ ತುಂಬಿಸಲು ಮುಗಿಬಿದ್ದಿರುವ ಗ್ರಾಹಕರು. | Kannada Prabha

ಸಾರಾಂಶ

ಪಶ್ಚಿಮ ಏಷ್ಯಾದ ದೇಶಗಳಲ್ಲಿ ಯುದ್ಧ ಮುಂದುವರಿದರೆ ಪೆಟ್ರೋಲ್‌, ಡೀಸೆಲ್‌ ಕೊರತೆಯಾಗಬಹುದು ಎಂಬ ಸುದ್ದಿ ಪಟ್ಟಣದ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದನ್ನು ನಂಬಿದ ದ್ವಿಚಕ್ರ ವಾಹನ ಸವಾರರು, ಟ್ರ್ಯಾಕ್ಟರ್‌ ಸೇರಿದಂತೆ ವಿವಿಧ ವಾಹನಗಳ ಚಾಲಕರು ಪೆಟ್ರೋಲ್‌ ಬಂಕ್‌ ಮುಂದೆ ಇಂಧನ ತುಂಬಿಸಲು ನೆರೆದಿದ್ದರು.

ನರಗುಂದ: ಕೊಲ್ಲಿ ದೇಶಗಳಲ್ಲಿನ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌ ಅಭಾವ ಉಂಟಾಗಬಹುದು, ದರದಲ್ಲಿ ವ್ಯತ್ಯಾಸವಾಗಬಹುದು ಎಂಬ ವದಂತಿ ಹಿನ್ನೆಲೆ ಮಂಗಳವಾರ ಪೆಟ್ರೋಲ್‌ ಬಂಕ್‌ಗಳಲ್ಲಿ ವಾಹನಗಳ ಸಾಲು ಕಂಡುಬಂದಿತು.

ತಾಲೂಕಿನಲ್ಲಿ ಇಲ್ಲಿಯವರೆಗೆ ಪೆಟ್ರೋಲ್‌ ಹಾಗೂ ಡೀಸೆಲ್‌ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬಂದಿಲ್ಲ. ಪಶ್ಚಿಮ ಏಷ್ಯಾದ ದೇಶಗಳಲ್ಲಿ ಯುದ್ಧ ಮುಂದುವರಿದರೆ ಪೆಟ್ರೋಲ್‌, ಡೀಸೆಲ್‌ ಕೊರತೆಯಾಗಬಹುದು ಎಂಬ ಸುದ್ದಿ ಪಟ್ಟಣದ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದನ್ನು ನಂಬಿದ ದ್ವಿಚಕ್ರ ವಾಹನ ಸವಾರರು, ಟ್ರ್ಯಾಕ್ಟರ್‌ ಸೇರಿದಂತೆ ವಿವಿಧ ವಾಹನಗಳ ಚಾಲಕರು ಪೆಟ್ರೋಲ್‌ ಬಂಕ್‌ ಮುಂದೆ ಇಂಧನ ತುಂಬಿಸಲು ನೆರೆದಿದ್ದರು.

ಈ ಕುರಿತು ತಹಸೀಲ್ದಾರ್‌ ಶ್ರೀಶೈಲ ತಳವಾರ ಪ್ರತಿಕ್ರಿಯಿಸಿ, ತಾಲೂಕಿನಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಪೂರೈಕೆಯಲ್ಲಿ ಸಮಸ್ಯೆಯಾಗಿಲ್ಲ. ಬೇಡಿಕೆಗೆ ಅನುಸಾರವಾಗಿ ತಾಲೂಕಿಗೆ ಇಂಧನ ಪೂರೈಕೆಯಾಗುತ್ತಿದೆ. ಗ್ರಾಹಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

ಸಿಲಿಂಡರ್‌ ಪಡೆಯಲು ಹರಸಾಹಸ

ನರಗುಂದ: ಪ್ರತಿನಿತ್ಯ ಜೀವನಕ್ಕೆ ಅವಶ್ಯವಿರುವ ಅಡುಗೆ ಅನಿಲ ಖರೀದಿ ಮಾಡಲು ಜನರು ಸರದಿಯಲ್ಲಿ ನಿಂತರೂ ಗ್ಯಾಸ್ ಸಿಲಿಂಡರ್‌ ಸಿಗದೆ ಪರದಾಡುತ್ತಿದ್ದಾರೆ.ಮಂಗಳವಾರ ಪಟ್ಟಣದ ಸಿದ್ದಲಿಂಗೇಶ್ವರ ಗ್ಯಾಸ್ ಏಜೆನ್ಸಿ ಮುಂದೆ ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ನೂರಾರು ಜನರು ಖಾಲಿ ಸಿಲಿಂಡರ್ ತೆಗೆದುಕೊಂಡು ಬಂದಿದ್ದರು. ಅಡುಗೆ ಅನಿಲ ಸಿಗದೇ ಬೇಸರ ಹೊರಹಾಕಿದರು. ಗ್ಯಾಸ್‌ ಬುಕ್‌ ಮಾಡಿ 10- 12 ದಿನವಾದರೂ ಅಡುಗೆ ಅನಿಲ ಸಿಗುತ್ತಿಲ್ಲ ಎಂದು ಕೆಲವು ಗ್ರಾಹಕರು ಅಳಲು ತೋಡಿಕೊಂಡರು.ಮನೆ ಬಳಕೆ ಸಿಲಿಂಡರ್ ಸಿಗದೆ ಜನ ಪರದಾಡಿದರೆ, ಮತ್ತೊಂದು ಕಡೆ ಹೋಟೆಲ್‌ಗಳ ಮಾಲೀಕರ ಪರಿಸ್ಥಿತಿ ಬಹಳ ಕಷ್ಟಕ್ಕೆ ಸಿಲುಕಿದೆ. ಬಹುತೇಕ ಹೋಟೆಲ್‌ಗಳಲ್ಲಿ ಕಟ್ಟಿಗೆ ಒಲೆಯಲ್ಲಿ ಅಡುಗೆ ತಯಾರಿಸುವ ಸ್ಥಿತಿ ನಿರ್ಮಾಣವಾಗಿದೆ.

ಸಿದ್ದಲಿಂಗೇಶ್ವರ ಗ್ಯಾಸ್ ಏಜೆನ್ಸಿಯಲ್ಲಿ ತಾಲೂಕಿನ 1900 ಜನರು ಸಿಲಿಂಡರ್ ಖರೀದಿಗೆ ಬುಕ್ಕಿಂಗ್‌ ಮಾಡಿದ್ದಾರೆ. ಆದರೆ ಇಂಡಿಯನ್ ಆಯಿಲ್‌ ಗ್ಯಾಸ್‌ ಕಂಪನಿಯಿಂದ ನಿತ್ಯ 320 ಸಿಲಿಂಡರ್ ಮಾತ್ರ ಬರುತ್ತಿವೆ ಎಂದು ಗ್ಯಾಸ್ ಏಜೆನ್ಸಿ ಮಾಲೀಕ ಕೋರಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳು ಸಂಸ್ಕೃತಿ ಜೀವಾಳ
ಹಾವೇರಿ ಜಿಲ್ಲೆಯ ವಿವಿಧೆಡೆ ಆಲಿಕಲ್ಲು, ಗಾಳಿ ಸಹಿತ ಸುರಿದ ಮಳೆ