ಬಳ್ಳಾರಿ: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯದ ಆಶಯವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದು ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಕೊಡುಗೆಗಳು ಇಂದಿಗೂ ಲಕ್ಷಾಂತರ ಜನರ ಬದುಕಿಗೆ ದಾರಿದೀಪವಾಗಿವೆ ಎಂದು ಹೇಳಿದರು.
ಎಡಿಸಿ ಮಹಮ್ಮದ್ ಝುಬೇರ್ ಎನ್. ಮಾತನಾಡಿದರು. ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷಾ ಅವರು ಡಿ. ದೇವರಾಜು ಅರಸು ಕುರಿತು ವಿಶೇಷ ಉಪನ್ಯಾಸ ನೀಡಿದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಹಾಗೂ ವಿವಿಧ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಡಿ. ದೇವರಾಜ ಅರಸು ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲುಕಂಭ ಪಂಪಾಪತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಎ.ಕೆ., ತಾಲೂಕು ಅಧಿಕಾರಿ ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಉಪಸ್ಥಿತರಿದ್ದರು.