ಕನ್ನಡಪ್ರಭ ವಾರ್ತೆ ಮೇಲುಕೋಟೆ
ಮಂಗಳವಾರ ಸಂಜೆ ಮೇಲುಕೋಟೆ ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದು ಮಾತನಾಡಿ, ದೇವಾಲಯದ ಸ್ಥಾನೀಕರು ಮತ್ತು ವ್ಯವಸ್ಥಾಪನಾ ಸಮಿತಿ ಈ ಬಗ್ಗೆ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರೊಂದಿಗೆ ಮಾತನಾಡಿ ಇಬ್ಬರೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ಷೇತ್ರದ ಅಭಿವೃದ್ಧಿಗೆ ಕಾರ್ಯ ಮಾಡಲಾಗುತ್ತದೆ ಎಂದರು.
ನವೆಂಬರ್ ಮಾಹೆಯಲ್ಲಿ ರಾಜಮುಡಿ ಉತ್ಸವದಲ್ಲಿ ಕುಟುಂಬ ಸಮೇತ ಭಾಗವಹಿಸುತ್ತೇನೆ. ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಚರ್ಚಿಸಿ ಸಿಎಂರನ್ನು ರಾಜಮುಡಿ ಉತ್ಸವಕ್ಕೆ ಕರೆತರಲು ಪ್ರಯತ್ನ ಮಾಡುತ್ತೇನೆ ಎಂದರು.ಕ್ಷೇತ್ರದ ಅಭಿವೃದ್ಧಿಗೆ ಆಗಬೇಕಾದ ಕೆಲಸ ಕಾರ್ಯಗಳ ಪಟ್ಟಿಮಾಡಿ ನನಗೆ ನೀಡಿದರೆ ಶ್ರೀಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಪಡುತ್ತೇನೆ. ಚಲುವನಾರಾಯಣಸ್ವಾಮಿ ವೈರಮುಡಿ ಉತ್ಸವದ ಬಗ್ಗೆ ಕೇಳಿದ್ದೆ. ಆದರೆ, ಬರಬೇಕೆಂದರೂ ಉತ್ಸವದ ವೇಳೆ ಆಗುತ್ತಿಲ್ಲ ಎಂದರು.
ಈ ವೇಳೆ ವ್ಯವಸ್ಥಾಪನಾ ಸಮಿತಿ ಪರ ಸ್ವಾಗತಿಸಿದ ಸದಸ್ಯ ಹಾಗೂ ವಕೀಲ ಕಾಡೇನಹಳ್ಳಿ ಸತೀಶ್ ಭಕ್ತಸ್ನೇಹಿಯಾಗಿ ಕ್ಷೇತ್ರದ ಅಭಿವೃದ್ದಿ ಕಾರ್ಯಗಳನ್ನು ವಿವರಿಸಿ ಸರ್ಕಾರದಿಂದ ಸಹಕಾರ ಕೊಡಿಸಲು ಕೋರಿದರು.
ದರ್ಶನ ಮುಗಿಸಿ ಹೊರಡಲು ಸಿದ್ಧರಾದ ಸಚಿವ ಬಾಲಕೃಷ್ಣಗೆ ಸ್ಥಾನೀಕರು ಮಹಾಮಂಗಳಾರತಿಯಿದ್ದು, ಚೆಲುವನಾರಾಯಣಸ್ವಾಮಿ ಸನ್ನಿಧಿಯಲ್ಲಿ ವಿಶೇಷವಾಗಿ ನಡೆಯಲಿದೆ ಎಂದಾಗ ಅರ್ಧಗಂಟೆ ಕಾದು ರಾಜಗೋಪುರದ ಮುಂದೆ ಸಾಂಪ್ರದಾಯಿಕ ಪದ್ಧತಿಯಂತೆ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡರು.
ಸುಳ್ಳಿನ ಮೇಲೆ ಬಿಜೆಪಿ, ಆರ್ಎಸ್ಎಸ್ ರಾಜಕೀಯ: ರಿಜ್ವಾನ್ ಹರ್ಷದ್
ತಾಲೂಕಿನ ಗೆಜ್ಜಲಗೆರೆ ಸಮೀಪದ ಖಾಸಗಿ ಹೋಟೆಲ್ನಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಕುದರಗುಂಡಿ ನಾಗೇಶ್ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಬಿಜೆಪಿ ಮತ್ತು ಆರ್ಎಸ್ಎಸ್ನಿಂದ ಈ ದೇಶವನ್ನು ರಕ್ಷಣೆ ಮಾಡಬೇಕಾದರೆ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಬೇಕಿದೆ ಎಂದರು.ಮುಂದಿನ ಚುನಾವಣೆ ವೇಳೆಗೆ ಕಾರ್ಯಕರ್ತರು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ತಳ ಮಟ್ಟಕ್ಕೆ ಕೊಂಡೊಯ್ದು ಮತದಾರರ ಸಂಘಟನೆಗೆ ಈಗಿನಿಂದಲೇ ಕಾರ್ಯೋನ್ಮುಕರಾಗಬೇಕು ಎಂದು ಸಲಹೆ ನೀಡಿದರು.