ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆ ಸಂಭ್ರಮ

KannadaprabhaNewsNetwork |  
Published : Oct 08, 2025, 01:00 AM IST
ಪೊಟೋ: 7ಎಸ್‌ಎಂಜಿಕೆಪಿ06ಸೊರಬ ತಾಲೂಕು ಕುಬಟೂರಿನಲ್ಲಿರುವ ತಮ್ಮ ತೋಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಪೂಜೆ ಮಾಡುವ ಮೂಲಕ ಭೂಮಿ ಹುಣ್ಣಿಮೆ ಹಬ್ಬ ಆಚರಿಸಿದರು. | Kannada Prabha

ಸಾರಾಂಶ

ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಳೆಗಳ ನಡುವೆ ಭೂಮಿ ತಾಯಿಗೆ ಮಂಗಳವಾರ ಜಿಲ್ಲಾದ್ಯಂತ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ರೈತಾಪಿ ವರ್ಗದವರು ಬೆಳೆದು ನಿಂತ ಪೈರುಗಳಿಗೆ ಉಡಿ ತುಂಬುವ ಮೂಲಕ ಭೂಮಿ ಹುಣಿಮೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಳೆಗಳ ನಡುವೆ ಭೂಮಿ ತಾಯಿಗೆ ಮಂಗಳವಾರ ಜಿಲ್ಲಾದ್ಯಂತ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು. ರೈತಾಪಿ ವರ್ಗದವರು ಬೆಳೆದು ನಿಂತ ಪೈರುಗಳಿಗೆ ಉಡಿ ತುಂಬುವ ಮೂಲಕ ಭೂಮಿ ಹುಣಿಮೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.

ಮುಂಗಾರಿನಲ್ಲಿ ಬಿತ್ತನೆ ಮಾಡಿದ ಬೆಳೆಗಳು ಹಾಲು ತುಂಬುವ ಭೂಮಿ ಹುಣ್ಣಿಮೆಯ ಸಮಯದಲ್ಲಿ ತುಂಬು ಗರ್ಭಿಣಿಯಂತೆ ಕಂಗೊಳಿಸುವ ಭೂಮಿ ತಾಯಿಗೆ ಮಡಿಲು ತುಂಬುವುದು ಭೂಮಿ ಹುಣ್ಣಿಮೆಯ ವಿಶೇಷವಾಗಿದ್ದು, ಹಬ್ಬದ ಮುನ್ನ ದಿನ ರಾತ್ರಿ ಇಡೀ ಮಾಡಿದ ವಿವಿಧ ಸಿಹಿ ಅಡುಗೆಯನ್ನು ನೈವೇದ್ಯವಾಗಿ ಮಾಡಿ ಪೂಜೆ ಸಲ್ಲಿಸಿ ಸವಿದರು.

ಭೂತಾಯಿ ಈ ಸಮಯದಲ್ಲಿ ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುತ್ತಾಳೆ ಎಂಬ ಪ್ರತೀತಿ ಇದೆ. ಹಾಗಾಗಿ ಭೂಮಿ ತಾಯಿಯನ್ನು ಗರ್ಭಿಣಿಯ ಸ್ಥಾನದಲ್ಲಿಟ್ಟು ಸೀಮಂತದ ಸಂಭ್ರಮದಂತೆ ರೈತರು ಪೂಜೆ ಸಲ್ಲಿಸುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯಾಗಿದೆ.

ಸೊರಬ ತಾಲೂಕು ಕುಬಟೂರಿನಲ್ಲಿರುವ ತಮ್ಮ ತೋಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ರೈತರು ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ತಯಾರಿಸಿ ಭೂಮಿ ತಾಯಿಗೆ ಅರ್ಪಣೆ ಮಾಡಿದರೆ. ಭೂಮಣ್ಣಿ ಬುಟ್ಟಿ ತಯಾರಿಸಿ ಚಿತ್ತಾರ ಬರೆದು ವಿಶಿಷ್ಟ ರೀತಿಯಲ್ಲಿ ಹಬ್ಬ ಆಚರಣೆ ಮಾಡುವುದು ಕೆಲವೆಡೆ ಇದೆ. ಮನೆಯಲ್ಲಿ ತಯಾರಿಸಿದ ಭೋಜನಗಳನ್ನು ಹೊಲಕ್ಕೆ ಸಮರ್ಪಿಸಿ, ನಂತರ ಹೊಲದಲ್ಲೇ ರೈತ ಕುಟುಂಬ ಸಾಮೂಹಿಕ ಊಟ ಮಾಡಿದರು.

ಬೆಳಗಿನ ಜಾವವೇ ಜಮೀನುಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಭತ್ತದ ಗದ್ದೆ ಹೊಂದಿರುವವರು ಸಸಿಯನ್ನು ಮುತ್ತೈದೆಯಂತೆ ಸಿಂಗರಿಸಿ ನೈವೇದ್ಯ ನೀಡಿದರೆ, ಕೆಲವರು ಅಡಕೆ ಮರಗಳಿಗೆ ವಿಶೇಷ ಪೂಜೆ ಸಲ್ಲಿಸಿ ನೈವೇದ್ಯ ಮಾಡಿದರು. ಹಸೆ ಚಿತ್ತಾರದಿಂದ ಅಲಂಕೃತಗೊಂಡಿರುವ ಎರಡು ಬುಟ್ಟಿಯಲ್ಲಿ ವಿವಿಧ ಬಗೆಯ ಅಡುಗೆ ಪದಾರ್ಥಗಳನ್ನು ತಮ್ಮ ಹೊಲಕ್ಕೆ ಒಯ್ದು, ಭೂಮಿಗೆ ನೈವೇದ್ಯ ಮಾಡಿ, ನಂತರ ಅಲ್ಲಿಯೇ ಊಟ ಮಾಡಲಾಗುತ್ತದೆ. ಬಳಿಕ ಚರಗವನ್ನು ಭೂಮಿತಾಯಿಗೆ ಹಾಕಿದರು. ಹಸಿರಿನಿಂದ ತುಂಬಿದ ಸಸಿಗಳನ್ನು ಗರ್ಭವತಿಯಾದ ಹೆಣ್ಣೆಂದು ಕಲ್ಪಿಸಿಕೊಂಡು ಆಕೆಗೆ ಬಯಕೆ ತೀರಿಸುವುದೇ ಈ ಹಬ್ಬದ ವಿಶಿಷ್ಟತೆ. ಭೂಮಾ ತೆಗೆ ಪೂಜೆ ಮಾಡಿ ಒಳ್ಳೆಯ ಫಸಲನ್ನು ನೀಡು ಎಂದು ಬೇಡಿಕೊಳ್ಳಲಾಗುತ್ತದೆ. ಇಷ್ಟು ವರ್ಷಗಳ ಕಾಲ ಅನ್ನವನ್ನು ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಲಾಗುತ್ತದೆ. ಪೂಜೆ ನಂತರ ಕುಟುಂಬದವರೆಲ್ಲರೂ ಒಟ್ಟಿಗೆ ಸೇರಿ ತಮ್ಮ ಜಾಗದಲ್ಲಿ ಕುಳಿತು ಭೋಜನ ಮಾಡುವುದು ಎಲ್ಲೆಡೆ ನಡೆದುಕೊಂಡು ಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!