ರುದ್ರಾಂಬಾ ಎಂ.ಪಿ.ಪ್ರಕಾಶ ಪಂಚಭೂತಗಳಲ್ಲಿ ಲೀನ

KannadaprabhaNewsNetwork |  
Published : May 01, 2024, 01:19 AM IST
ಹೂವಿನಹಡಗಲಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಶರ ಪತ್ನಿ ಎಂ.ಪಿ.ರುದ್ರಾಂಬಾ ಇವರ ಅಂತಿಮ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್‌.ಜಮೀರ್‌ ಅಹಮದ್‌ ಹಾಗೂ ಇತರೆ ಗಣ್ಯರು. | Kannada Prabha

ಸಾರಾಂಶ

ಮಂಗಳವಾರ ಸಂಜೆ ಹೂವಿನಹಡಗಲಿ ಪಟ್ಟಣದ ರಂಗಭಾರತಿ ಹತ್ತಿರದ ಎಂ.ಪಿ. ಪ್ರಕಾಶ ಸಮಾಧಿ ಬಳಿ ಅಂತ್ಯಕ್ರಿಯೆ ನೆರವೇರಿತು.

ಕನ್ನಡಪ್ರಭ ವಾರ್ತೆ ಹೂವಿನಹಡಗಲಿ

ಮಾಜಿ ಉಪ ಮುಖ್ಯಮಂತ್ರಿ ದಿ. ಎಂ.ಪಿ.ಪ್ರಕಾಶ ಅವರ ಪತ್ನಿ ಎಂ.ಪಿ. ರುದ್ರಾಂಬಾ ಸೋಮವಾರ ರಾತ್ರಿ ನಿಧನರಾಗಿದ್ದು, ಮಂಗಳವಾರ ಸಂಜೆ ಪಟ್ಟಣದ ರಂಗಭಾರತಿ ಹತ್ತಿರದ ಎಂ.ಪಿ. ಪ್ರಕಾಶ ಸಮಾಧಿ ಬಳಿ ಅಂತ್ಯಕ್ರಿಯೆ ನೆರವೇರಿತು.

ಬೆಳಗ್ಗೆಯಿಂದ ಎಂ.ಪಿ. ಪ್ರಕಾಶರ ತೋಟದ ಮನೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಾಮನೂರು ಶಿವಶಂಕ್ರಪ್ಪ, ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಶಾಸಕರಾದ ಎಚ್‌.ಆರ್‌. ಗವಿಯಪ್ಪ, ಇ. ತುಕಾರಾಂ, ಕೃಷ್ಣ ನಾಯ್ಕ, ಕೆಎಂಎಫ್‌ ಅಧ್ಯಕ್ಷ ಎಸ್‌. ಭೀಮಾನಾಯ್ಕ, ಸಹಕಾರಿ ಧುರೀಣ, ಮುಂಡರಗಿ ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ಮಾಜಿ ಶಾಸಕರಾದ ಜಿ.ಎಸ್‌. ಗಡ್ಡದೇವರ ಮಠ, ಅಮರೇಗೌಡ ಭಯ್ಯಾಪುರ, ಪಿ.ಟಿ. ಪರಮೇಶ್ವರ ನಾಯ್ಕ, ಬಿ.ಚಂದ್ರನಾಯ್ಕ, ನಂದಿಹಳ್ಳಿ ಹಾಲಪ್ಪ, ಮಾಜಿ ಸಚಿವ ಬಿ. ಶ್ರೀರಾಮುಲು, ಎಸ್‌. ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಮಠಗಳ ಶ್ರೀಗಳು ಹಾಗೂ ಹರಗುರು ಚರಮೂರ್ತಿಗಳು ಅಂತಿಮ ದರ್ಶನ ಪಡೆದರು. ಅವರ ಪುತ್ರಿ ಶಾಸಕಿ ಎಂ.ಪಿ. ಲತಾ ಇದ್ದರು

ರುದ್ರಾಂಬಾ ಅವರ ಅಂತಿಮ ಯಾತ್ರೆಯು ಪಟ್ಟಣದ ವಿವಿಧ ರಸ್ತೆಗಳ ಮೂಲಕ ತೆರಳಿ, ರಂಗಭಾರತಿ ಬಳಿ ಇರುವ ಎಂ.ಪಿ. ಪ್ರಕಾಶರ ಸಮಾಧಿ ಬಳಿ ಅಂತ್ಯಸಂಸ್ಕಾರ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ!
ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ