ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ

KannadaprabhaNewsNetwork |  
Published : Jul 04, 2025, 11:54 PM IST
ಪರಿಹಾರ ನೀಡದ ಹಿನ್ನೆಲೆಯಲ್ಲಿ ನಗರದ ಎಸಿ ಕಚೇರಿಯಲ್ಲಿ ಜಪ್ತಿ ಕಾರ್ಯ ನಡೆಸಿದ ಕೋರ್ಟ ಸಿಬ್ಬಂದಿ | Kannada Prabha

ಸಾರಾಂಶ

ಮುಧೋಳ ಬೈಪಾಸ್ ರಸ್ತೆ ವಿಸ್ತರಣೆಗೆ ಭೂಮಿ ಕಳೆದುಕೊಂಡ ರೈತನಿಗೆ ಪರಿಹಾರ ನೀಡದ ಹಿನ್ನೆಲೆ ಕೋರ್ಟ್‌ ಆದೇಶದ ಮೇರೆಗೆ ಶುಕ್ರವಾರ ವಕೀಲ ಟಿ.ಡಿ.ನಾಡಗೌಡ ಅವರು ನ್ಯಾಯಾಲಯದ ಸಿಬ್ಬಂದಿಗಳಾದ ಹೇಮಂತ ಜಾಧವ, ಬಿ.ವೈ.ಜಂಗ್ಲಿ, ವಿ.ಎಂ.ಗಣಾಚಾರಿ ಅವರು ಜಮಖಂಡಿ ಉಪವಿಭಾಗಾಧಿಕಾರಿ ಕಚೇರಿಯ ಪಿಠೋಪಕರಣ ಜಪ್ತಿ ಮಾಡಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಮುಧೋಳ ಬೈಪಾಸ್ ರಸ್ತೆ ವಿಸ್ತರಣೆಗೆ ಭೂಮಿ ಕಳೆದುಕೊಂಡ ರೈತನಿಗೆ ಪರಿಹಾರ ನೀಡದ ಹಿನ್ನೆಲೆ ಕೋರ್ಟ್‌ ಆದೇಶದ ಮೇರೆಗೆ ಶುಕ್ರವಾರ ವಕೀಲ ಟಿ.ಡಿ.ನಾಡಗೌಡ ಅವರು ನ್ಯಾಯಾಲಯದ ಸಿಬ್ಬಂದಿಗಳಾದ ಹೇಮಂತ ಜಾಧವ, ಬಿ.ವೈ.ಜಂಗ್ಲಿ, ವಿ.ಎಂ.ಗಣಾಚಾರಿ ಅವರು ಜಮಖಂಡಿ ಉಪವಿಭಾಗಾಧಿಕಾರಿ ಕಚೇರಿಯ ಪಿಠೋಪಕರಣ ಜಪ್ತಿ ಮಾಡಿದರು. 2011-12 ರಲ್ಲಿ ಮುಧೋಳ ನಗರದ ಬೈಪಾಸ್ ರಸ್ತೆ ಅಗಲೀಕರಣಗೊಳಿಸಲಾಗಿತ್ತು. ರೈತ ಭಿಮನಗೌಡ ರಾಮನೌಡ ಪಾಟೀಲ ಪರಿಹಾರದ ಹಣ ಸಾಕಾಗುವುದಿಲ್ಲ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಮಖಂಡಿ ಉಪವಿಭಾಗಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ ಮಾಡಿಕೊಳ್ಳಲು ಜಮಖಂಡಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಹಮದ್‌ ಇಮ್ರಿಯಾಜ್‌ ಅಹಮದ್ ಆದೇಶ ಮಾಡಿದ್ದರು.

ಎಸಿ ಕಚೇರಿಯ 3 ಕಟ್ಟಿಗೆ ಬಾಕ್‌, 6 ಕುರ್ಚಿ, ಸಾರ್ವಜನಿಕರು ಕೂಡುವ ಕಬ್ಬಿಣದ 4 ಕುರ್ಚಿ, ಒಂದು ಜೆರಾಕ್ಸ್ ಮಷೀನ್, ಒಂದು ಪ್ರಿಂಟರ್ ವಿಥ್ ಜೆರಾಕ್ಸ್ ಮಷಿನ್, 2 ಸಿಪಿಯು, 3 ಮಾನಿಟರ್‌ ಮುಂತಾದ ವಸ್ತುಗಳನ್ನು ಜಪ್ತಿ ಮಾಡಿದರು.

ಈ ವೇಳೆ ರೈತ ಈರಣ್ಣ ಯಂಕಚ್ಚಿ ಅವರು ಮಾತನಾಡಿ, ಪರಿಹಾರದ ಹಣ ಸಾಕಾಗುವುದಿಲ್ಲ ಎಂದು ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ ನ್ಯಾಯಾಲಯ ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಆದೇಶ ಮಾಡಿತ್ತು. ಆದರೆ ಉಪವಿಭಾಗಾಧಿಕರು ನ್ಯಾಯಾಲಯದ ಆದೇಶ ಲೆಕ್ಕಿಸದೆ ಕಚೇರಿಯ ಕಾರ್ಯಾಲಯಕ್ಕೆ ಬೀಗ ಜಡಿದು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ನ್ಯಾಯಾಲಯದಿಂದ ಹೆಚ್ಚುವರಿ ಪರಿಹಾತ ನೀಡಲು ಆದೇಶವಾಗಿದೆ. ಹಿರಿಯ ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಅಪೀಲು ಮಾಡಲು ಅವಕಾಶ ನೀಡಿದೆ. ಹೈಕೊರ್ಟಗೆ ಮೇಲ್ಮನವಿ ಸಲ್ಲಿಸಲಾಗಿದೆ. ಇನ್ನೂ ಪ್ರಕರಣ ಇತ್ಯರ್ಥವಾಗಿಲ್ಲ. ನಮ್ಮ ಇಲಾಖೆಯಿಂದ ರೈತರಿಗೆ ಅನುಕೂಲ ಆಗುವ ಕೆಲಸ ಮಾಡುತ್ತೇವೆ. ಕಚೇರಿಯ ಕಾರ್ಯಕ್ಕೆ ತೊಂದರೆ ಆಗದಂತೆ ಕ್ರಮ ಜರುಗಿಸಲು ಮನವಿ ಮಾಡಿದ್ದು, ಆ ಹಿನ್ನೆಲೆಯಲ್ಲಿ ಕೆಲ ಕೋಣೆಯ ಬಾಗಿಲುಗಳಿಗೆ ಬೀಗ ಹಾಕಲಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸ್ಪಷ್ಟೀಕರಣ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ