ಗಣಿತ ಕುರಿತು ಹೆಚ್ಚಿನ ಸಂಶೋಧನೆ ಆಗಲಿ: ಶಿಕರೆ

KannadaprabhaNewsNetwork |  
Published : Apr 11, 2026, 02:00 AM IST
ಕವಿವಿಯಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಂಶೋಧನಾ ನಿಯತಕಾಲಿಕೆಯನ್ನು ಬಿಡುಗಡೆಯಾಯಿತು. | Kannada Prabha

ಸಾರಾಂಶ

ಗಣಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಂಶೋಧನೆ ನಡೆಯಬೇಕು ಎಂದಿರುವ ಇಂಡಿಯನ್ ಮಥೆಮೇಟಿಕಲ್ ಸೊಸೈಟಿಯ ಕಾರ್ಯದರ್ಶಿ ಪ್ರೊ.ಎಂ.ಎಂ. ಶಿಕರೆ ಹೇಳಿದರು.

ಧಾರವಾಡ:

ಗಣಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಂಶೋಧನೆ ನಡೆಯಬೇಕು ಎಂದಿರುವ ಇಂಡಿಯನ್ ಮಥೆಮೇಟಿಕಲ್ ಸೊಸೈಟಿಯ ಕಾರ್ಯದರ್ಶಿ ಪ್ರೊ.ಎಂ.ಎಂ. ಶಿಕರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಣಿತ‌ ಸಂಬಂಧಿಸಿದ ವಿಷಯಗಳ ಪ್ರಾಮುಖ್ಯತೆ ಕುರಿತು ತಿಳಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ ಪಾವಟೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸಸ್ ವಿವಿಧ ವಿಭಾಗಗಳ ಜತೆಗೂಡಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರೊ. ಎಚ್.ಬಿ. ವಾಲಿಕಾರ ಅವರ 75ನೇ ಜನ್ಮದಿನೋತ್ಸವದಲ್ಲಿ ''''''''ಗಣಿತ ಶಾಸ್ತ್ರೀಯ ವಿಜ್ಞಾನಗಳು ಮತ್ತು ಅದರ ಅನ್ವಯಿಕೆಗಳು'''''''' ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿದ ಅವರು, ಗಣಿತಶಾಸ್ತ್ರದಲ್ಲಿ ಅನೇಕ ಹೊಸ ರೀತಿಯ ಬೆಳವಣಿಗೆಯಾಗಿವೆ ಎಂದರು.

ಕವಿವಿ ವಿಶ್ರಾಂತ ಕುಲಪತಿ ‌ಪ್ರೊ. ಎಚ್.ಬಿ. ವಾಲಿಕಾರ ಮಾತನಾಡಿ, ಗಣಿತ ಒಂದು ಸರಳ ವಿಷಯ. ನನ್ನ ಉಸಿರು ಇರುವ ವರಗೆ ಗಣಿತ ಕಲಿಯುತ್ತೇನೆ ಮತ್ತು ಕಲಿಸುತ್ತೇನೆ ಹಾಗೂ ಗಣಿತ ಸಂಬಂಧಿಸಿದ ವಿಷಯಗಳ ಬೆಳವಣಿಗೆ ಶ್ರಮಿಸುತ್ತನೆ ಎಂದು ಹೇಳಿದರು.

ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ‌ಮಟ್ಟಿಹಾಳ‌ ಮಾತನಾಡಿ, ಪ್ರೊ. ವಾಲಿಕಾರ ಅವರೊಬ್ಬ ಶ್ರೇಷ್ಠ ಗಣಿತ ತಜ್ಞರು. ಅನೇಕ ಆಡಳಿತಾತ್ಮಕ ಸುಧಾರಣೆಗಳ ಮೂಲಕ ಕವಿವಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಇದೇ ವೇಳೆ ಸಂಶೋಧನಾ ಲೇಖನಗಳ ಸಂಗ್ರಹದ ಸಂಶೋಧನಾ ನಿಯತಕಾಲಿಕೆ ಬಿಡುಗಡೆ ಮಾಡಲಾಯಿತು. 60 ತಾಂತ್ರಿಕ ಗೋಷ್ಠಿಗಳು ಜರುಗಿದವು. 200ಕ್ಕಿಂತ ಹೆಚ್ಚು ಸಂಶೋಧಕರು ಪ್ರಬಂಧ ಮಂಡಿಸಿದರು.

ಕಾರ್ಯಕ್ರಮದಲ್ಲಿ ಪ್ರೊ. ಎ.ಬಿ. ವೇದಮೂರ್ತಿ, ಡಾ. ಸುಭಾಷಚಂದ್ರ, ನಾಟೀಕಾರ, ಪ್ರೊ. ಎಸ್.ಸಿ. ಶಿರಾಳಶೆಟ್ಟಿ, ಪ್ರೊ. ಶ್ರೀದೇವಿ, ಪ್ರೊ. ನಾಗೇಶ.ಎಸ್, ಪ್ರೊ. ಐ.ಜಿ. ಸನದಿ, ಪ್ರೊ. ಪಿ.ಜಿ. ಪಾಟೀಲ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋರ್ಟ್‌ನಲ್ಲಿ ವಾದ ಮಾಡುವಾಗಲೇ ಹೃದಯಾಘಾತದಿಂದ ವಕೀಲ ಸಾವು
ಹಿಟ್ನಾಳ-ಹುಲಿಗಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ