ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಗುರು ಭವನದಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳ ಬಿಸಿಯೂಟ ತಯಾರಿಕಾ ಸಿಬ್ಬಂದಿಗೆ ಸಮವಸ್ತ್ರ ವಿತರಿಸಿ ಮಾತನಾಡಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ಉಚಿತ ಆರೋಗ್ಯ ಸೇವೆ, ಪಡಿತರ ಕಿಟ್, ಕೋವಿಡ್ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವು, ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ಸೇರಿದಂತೆ ಆರೋಗ್ಯ ಸಲಕರಣೆಗಳನ್ನು ಟ್ರಸ್ಟ್ನಿಂದ ನೀಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಟ್ರಸ್ಟ್ ಮುಂದಾಗಿತ್ತು ಎಂದರು.
ತಾಲೂಕಿನ ಶಿಥಿಲ ದೇವಾಲಯಗಳ ಜೀರ್ಣೋದ್ಧಾರಕ್ಕೆ ಅಗತ್ಯ ಆರ್ಥಿಕ ನೆರವು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳೆಗೆ ಶೈಕ್ಷಣಿಕ ಶುಲ್ಕ ಭರಿಸುವ ಜತೆಗೆ ಇನ್ನು ಹಲವು ಜನೋಪಯೋಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕದಲೂರು ಉದಯರ್ ಚಾರಿಟಬಲ್ ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.ಬಿಇಒ ಸಿ.ಎಚ್.ಕಾಳೀರಯ್ಯ, ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಶಿಥಿಲಗೊಂಡಿವೆ. ಈ ಶಾಲೆಗಳನ್ನು ಟ್ರಸ್ಟ್ನಿಂದ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕರಾದ ಮಂಗಳಮ್ಮ, ರಾಜೇಶ್ವರಿ, ಟ್ರಸ್ಟ್ ನಿರ್ದೇಶಕ ಕೆ.ಎಂ.ರವಿ, ದಿನೇಶ್ ಬಾಬು, ಪುರಸಭಾ ಸದಸ್ಯರಾದ ಕೋಕಿಲಅರುಣ್, ವೆಂಕಟೇಶ್, ಅಜ್ಲಾನ್ ಖಾನ್, ಶಿಕ್ಷಣ ಇಲಾಖೆ ರವೀಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್ ಇದ್ದರು.
ನಾಗಮಂಗಲ:ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಿಂದ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್, ಲ್ಯಾಟರಲ್ ಎಂಟ್ರಿ ಸ್ಕೀಂ ಅಡಿ ನೇರವಾಗಿ 2ನೇ ವರ್ಷ, 3ನೇ ಸೆಮಿಸ್ಟರ್ಗೆ ಡಿಪ್ಲೋಮಾ ಕೋರ್ಸ್ ಗಳ ಪ್ರವಾಶಾತಿಗೆ 2 ವರ್ಷಗಳ ಐಟಿಐ, ದ್ವಿತೀಯ ಪಿಯುಸಿ(ವಿಜ್ಞಾನ) ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದವರಿಗೆ ಆಫ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.