ಜಿ.ಡಿ. ಭಟ್ಟರಿಗೆ ಗೋಪಾಲಕೃಷ್ಣ ನಾಯರಿ ರಂಗ ಪ್ರಶಸ್ತಿ

KannadaprabhaNewsNetwork |  
Published : Jan 22, 2025, 12:34 AM IST
21ನಾಯರಿ | Kannada Prabha

ಸಾರಾಂಶ

ಬೆಂಗಳೂರಿನ ಸಮಸ್ತರು ರಂಗ ಸಂಶೋಧನಾ ಕೇಂದ್ರ ವತಿಯಿಂದ ಹಂಗಾರಕಟ್ಟೆಯ ಯಕ್ಷಗಾನ ಕಲಾಕೇಂದ್ರದ ಸಹಕಾರದಲ್ಲಿ ಖ್ಯಾತ ರಂಗನಿರ್ದೇಶಕ ಗೋಪಾಲಕೃಷ್ಣ ನಾಯರಿ ೨ನೇ ವರ್ಷದ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ನಡೆಯಿತು.

ಸಾಧಕರ ಆದರ್ಶಗಳು ನಮಗೆ ದಾರಿ ದೀಪವಾಗಲಿ: ಡಾ.ತಲ್ಲೂರು

ಕನ್ನಡಪ್ರಭ ವಾರ್ತೆ ಕುಂದಾಪುರ

ಬೆಂಗಳೂರಿನ ಸಮಸ್ತರು ರಂಗ ಸಂಶೋಧನಾ ಕೇಂದ್ರ ವತಿಯಿಂದ ಇಲ್ಲಿನ ಹಂಗಾರಕಟ್ಟೆಯ ಯಕ್ಷಗಾನ ಕಲಾಕೇಂದ್ರದ ಸಹಕಾರದಲ್ಲಿ ಖ್ಯಾತ ರಂಗನಿರ್ದೇಶಕ ಗೋಪಾಲಕೃಷ್ಣ ನಾಯರಿ ೨ನೇ ವರ್ಷದ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಗೋಪಾಲಕೃಷ್ಣ ನಾಯರಿ ಅವರು ಯಾವುದೇ ಪ್ರಶಸ್ತಿ, ಪುರಸ್ಕಾರದ ಹಂಗಿಲ್ಲದೆ ಕೇವಲ ರಂಗಭೂಮಿ, ನಾಟಕ ಬಗ್ಗೆ ಚಿಂತನೆ ನಡೆಸಿದ ಮಹಾನ್ ಸಾಧಕ. ಸಾಧಕರಿಗೆ ಸಾವಿಲ್ಲ, ಅವರ ಆದರ್ಶಗಳು ನಮಗೆ ದಾರಿದೀಪವಾಗಬೇಕು. ಅವರ ಹೆಸರಿನಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.ಯಕ್ಷಗಾನ ಕಲಾಕೇಂದ್ರದ ರಾಜಶೇಖರ್ ಹೆಬ್ಬಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಗೋಪಾಲಕೃಷ್ಣ ನಾಯರಿ ಅವರ ರಂಗಭೂಮಿ, ಯಕ್ಷಗಾನ, ನೃತ್ಯ ಮೊದಲಾದ ಸಾಂಸ್ಕೃತಿಕ ರಂಗದ ಬಗ್ಗೆ ಇದ್ದ ತತ್ಪರತೆ, ಸಮರ್ಪಣಾ ಭಾವನೆಯನ್ನು ಪ್ರಸ್ತಾಪಿಸಿದರು.ಕಾರ್ಯಕ್ರಮದಲ್ಲಿ ಉತ್ತರ ಕನ್ನಡದ ಪ್ರಸಿದ್ಧ ಕಲಾವಿದ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ರಂಗಕರ್ಮಿ ಕೆಕ್ಕಾರು ಗೋಪಾಲಕೃಷ್ಣ ದೇವರು ಭಟ್ಟ ಅವರಿಗೆ ೨೦೨೫ ರ ‘ಶ್ರೀ ಗೋಪಾಲಕೃಷ್ಣ ನಾಯರಿ ರಂಗ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಬ್ರಹ್ಮಾವರ ತಾಲೂಕು ಅಧ್ಯಕ್ಷ ವೈಕುಂಠ ಹೇರ್ಳೆ ಸಂಸ್ಮರಣಾ ನುಡಿಗಳನ್ನಾಡಿದರು. ಶ್ರೀ ಗಜಾನನ ಕಲೆ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಟ್ರಸ್ಟ್‌ನ ಸಂತೋಷ್ ಯಾಜಿ ಮಣ್ಣಿಗೆ ಅವರು ಅಭಿನಂದನಾ ನುಡಿಗಳನ್ನಾಡಿದರು.ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟಿನ ವಿಶೇಷ ಸರ್ಕಾರಿ ಅಭಿಯೋಜಕ ಬದರಿನಾಥ್ ಕೆ., ಗೋಪಾಲಕೃಷ್ಣ ನಾಯರಿ ಅವರ ಸಹೋದರ ಕೆ.ರಾಧಾಕೃಷ್ಣ ನಾಯರಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶಿವಕುಮಾರ್, ರಂಗಕರ್ಮಿ ರಾಮಚಂದ್ರ ದತ್ತ ಉಪಸ್ಥಿತರಿದ್ದರು. ನಂತರ ಕಾರ್ಯಕ್ರಮದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಿವೃತ್ತ ಶಿಕ್ಷಕ ಗಣಪತಿ ನಾಯಕ್ ಸ್ವಾಗತಿಸಿದರು. ರಾಘವೇಂದ್ರ ನಾಯರಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''