ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಗಡದಿಂ ಶ್ರೀ ಲಕ್ಮೀವೆಂಕಟೇಶ್ವರ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಪ್ರಕಾಶ್ ರಾವ್ ನೇತೃತ್ವದಲ್ಲಿ ಹೋಮ ಪೂಜಾ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ರಥೋತ್ಸವದ ಹಿನ್ನಲೆಯಲ್ಲಿ ದೇವಸ್ಥಾನವನ್ನು ತಳಿರು ತೋರಣ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದಲ್ಲೇ ಹೋಮ ಹವನ, ರಥಬಲಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಲಾಗಿತ್ತು.
ಶಾಸಕರಿಂದ ರಥಕ್ಕೆ ಪೂಜೆಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ತಹಸೀಲ್ದಾರ್ ಪ್ರಶಾಂತ್ ಕೆ ಪಾಟೀಲ್ ದೇವಾಲಯದಲ್ಲಿ ಸ್ವಾಮಿಗೆ ವಿಷೇಶ ಪೂಜೆ ಸಲ್ಲಿಸಿ, ನಂತರ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಸಂಘಗಳಿಂದ ಅನ್ನಸಂತರ್ಪಣೆ
ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಅವರ ಕುಟುಂಬದ ಸದಸ್ಯರು ಇಂದು ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಥವನ್ನು ಎಳೆದರು. ಪ್ರತಿ ವರ್ಷದಂತೆ ಈ ಬಾರಿಯೂ ಜಾತ್ರೆಗೆ ಬಂದಿದ್ದ ಭಕ್ತ ಸಮೂಹಕ್ಕೆ ಮಜ್ಜಿಗೆ, ಕುಡಿಯುವ ನೀರು, ಪಾನಕ, ಹೆಸರಬೇಳೆ ಇತ್ಯಾದಿಗಳನ್ನು ವಿತರಿಸಿದರು. ವಿವಿಧ ಸಂಘ ಸಂಸ್ಥೆಗಳಿಂದ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯದಲ್ಲಿ ಭಕ್ತಿರಿಗೆ ಪ್ರಸಾದ ವಿತರಿಸಿದರು.