ಗದಗ ಉಪನ್ಯಾಸಕಿ ಹೃದಯಾಘಾತದಿಂದ ನಿಧನ

KannadaprabhaNewsNetwork |  
Published : Jul 11, 2025, 11:48 PM ISTUpdated : Jul 12, 2025, 12:43 PM IST
ಪೋಟೋ ಇದೆ. | Kannada Prabha

ಸಾರಾಂಶ

ರಾಜ್ಯಾದ್ಯಂತ ಹೃದಾಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸಂದರ್ಭದಲ್ಲಿಯೇ ಇಲ್ಲಿನ ಉಪನ್ಯಾಸಕಿಯೋರ್ವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ‌ ಸಾವನ್ನಪ್ಪಿದ್ದು ಜಿಲ್ಲೆಯಾದ್ಯಂತ ತಲ್ಲಣಕ್ಕೆ ಕಾರಣವಾಗಿದೆ.

ಗದಗ: ರಾಜ್ಯಾದ್ಯಂತ ಹೃದಾಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸಂದರ್ಭದಲ್ಲಿಯೇ ಇಲ್ಲಿನ ಉಪನ್ಯಾಸಕಿಯೋರ್ವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ‌ ಸಾವನ್ನಪ್ಪಿದ್ದು ಜಿಲ್ಲೆಯಾದ್ಯಂತ ತಲ್ಲಣಕ್ಕೆ ಕಾರಣವಾಗಿದೆ.ನಗರದ ನಿವಾಸಿ ಹಾಗೂ ಸೊರಟೂರು ಗ್ರಾಮದ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕಿ ಪ್ರಭಾ ಕಲ್ಮಠ (49) ಹೃದಯಾಘಾತದಿಂದ ನಿಧನರಾಗಿದ್ದಾರೆ.

 ಅವರು ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ, ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬಸ್ಥರು ಮತ್ತು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಶೈಕ್ಷಣಿಕ ವಲಯ ಮತ್ತು ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು