ಕನ್ನಡಪ್ರಭವಾರ್ತೆ ಗುಳೇದಗುಡ್ಡ
ಶುಕ್ರವಾರ ಪಟ್ಟಣದ ಎಸ್.ಆರ್.ಶೆಟ್ಟರ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಈ ಬಾರಿ ಮೋದಿ ನೋಡಿ ಮತ ಕೊಡೋದಿಲ್ಲ. ನಾವು ಪಕ್ಷ ನೋಡಿ, ಮುಖ ನೋಡಿ ವೋಟು ಹಾಕಿ ಎಂದು ಕೇಳಂಗಿಲ್ಲ. ನಿಮ್ಮ ಕೆಲಸವನ್ನು ಯಾರ ಮಾಡ್ತಾರ ಅವರಿಗೆ ವೋಟು ಹಾಕ್ರಿ ಅಂತ ಕೇಳ್ತಿವಿ ಎಂದರು.ಗದ್ದಿಗೌಡರು ಏನು ಕೆಲಸ ಮಾಡಿದ್ದಾರೆಂದು ವೋಟು ಹಾಕುತ್ತೀರಿ?. ಇನ್ನೊಬ್ರ ಹೆಸರಿನ ಮೇಲೆ ಆರಿಸಿ ಬರೋದು, ಬಂದ ಮೇಲೆ ನಿದ್ದಿ ಮಾಡೋದೆ ಅವರ ಕೆಲ್ಸಾ ಎಂದು ವ್ಯಂಗ್ಯವಾಡಿದರು.
ಕಿವಿ ಹಿಂಡಿ ಕೇಳ್ತಾರ:₹ 4 ಲಕ್ಷ 36 ಸಾವಿರ ಕೋಟಿ ಜಿಎಸ್ಟಿ ಹಣ ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಹೋಗುತ್ತೆ. ಕರ್ನಾಟಕದ 28 ಲೋಕಸಭಾ ಸದಸ್ಯರೊಳಗೆ 26 ಜನ ಬಿಜೆಪಿಯವರೇ ಇದ್ದಾರೆ. ಸಾವಿರ ಕೋಟಿ ಪರಿಹಾರ ಕೇಳಿ ಅಂದರೆ, ಒಬ್ಬ ಸದಸ್ಯನೂ ತುಟಿ ಪಿಟಕ್ ಅನ್ನಲಿಲ್ಲ. ಈ ಬಾರಿ ಬಾಗಲಕೋಟೆ ಬಿಜಾಪುರದಲ್ಲಿ ಬದಲಾವಣೆ ಮಾಡಿದರೆ ನಮ್ಮ ಸದಸ್ಯರು ಮೋದಿಯವರ ಕಿವಿ ಹಿಂಡಿ ಕೇಳುತ್ತಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ತೊರೆದ 20ಕ್ಕೂ ಹೆಚ್ಚು ಮುಸ್ಲಿಂ ಯುವಕರು ಕಾಂಗ್ರೆಸ್ ಸೇರ್ಪಡೆಗೊಂಡರು. ಅವರಿಗೆ ಶಿವಾನಂದ ಪಾಟೀಲ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ವೇದಿಕೆ ಮೇಲೆ ಹೊಳಬಸು ಶೆಟ್ಟರ್, ಮಹೇಶ ಹೊಸಗೌಡರ, ರಾಜು ತಾಪಡಿತಾ, ಹನಮಂತಗೌಡ ಯಕ್ಕಪ್ಪನವರ, ನಾಗೇಶ ಪಾಗಿ, ರಫೀಕ್ ಕಲ್ಬುರ್ಗಿ, ಎಂ.ಬಿ.ಹಂಗರಗಿ, ಅಮಾತೆಪ್ಪ ಕೊಪ್ಪಳ, ನೇಕಾರ ಜಿಲ್ಲಾ ಮುಖಂಡ ಚಂದ್ರಕಾಂತ ಶೇಖಾ, ಶ್ರೀಕಾಂತ ಹುನಗುಂದ, ಶಶಿಕಾಂತ ಊದಗಟ್ಟಿ, ಮಲ್ಲಣ್ಣ ಯಲಿಗಾರ ಸೇರಿದಂತೆ ಇನ್ನಿತರರು ಇದ್ದರು.